ಸೀತಾಪುರ: ಹಿಂದೂ ಯುವತಿಯನ್ನು ಅಪಹರಿಸಿದ ಆರೋಪದ ಮೇಲೆ ಏಳು ಮಂದಿಯನ್ನು ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಿಂದ ಮತಾಂತರ ನಿಷೇಧ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಪ್ರಮುಖ ಆರೋಪಿ ಜಬ್ರೇಲ್ ಪರಾರಿಯಾಗಿದ್ದಾನೆ. ನ.24 ರಂದು ಈ ಘಟನೆ ನಡೆದಿದ್ದು, ಅಂದಿನಿಂದ ಪ್ರಮುಖ ಆರೋಪಿ ಜಬ್ರೇಲ್ ಕೂಡ ನಾಪತ್ತೆಯಾಗಿದ್ದಾನೆ ಎಂದು ಯುವತಿಯ ತಾಯಿ ದೂರಿನಲ್ಲಿ ಹೇಳಿದ್ದಾರೆ. ನ.27 ರಂದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
‘ಮತಾಂತರ ನಿಷೇಧ ಕಾಯ್ದೆಯಡಿ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಏಳು ಜನರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ಆತನನ್ನು ಆದಷ್ಟು ಬೇಗ ಪತ್ತೆ ಹಚ್ಚುತ್ತೇವೆ. ಇದರಲ್ಲಿ ಪೊಲೀಸರ ಕಡೆಯಿಂದ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಎಸ್ಪಿ ರಾಜೀವ್ ದೀಕ್ಷಿತ್ ತಿಳಿಸಿದರು.
Comments are closed.