ರಾಷ್ಟ್ರೀಯ

ರೈತರು ಕೃಷಿ ಸಚಿವ ನರೇಂದ್ರ ತೋಮರ್, ಪೀಯೂಷ್ ಗೋಯಲ್ ನೀಡುವ ಮಾಹಿತಿಯನ್ನು ಅಲಿಸಬೇಕು: ಮೋದಿ

Pinterest LinkedIn Tumblr


ನವದೆಹಲಿ: ಪ್ರತಿಭಟನೆ ನಡೆಸುತ್ತಿರುವ ರೈತರು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನೀಡುವ ಮಾಹಿತಿಯನ್ನು ಆಲಿಸಬೇಕು ಎಂದು ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

‘ನನ್ನ ಇಬ್ಬರು ಕ್ಯಾಬಿನೆಟ್ ಸಹೋದ್ಯೋಗಿಗಳಾದ ನರೇಂದ್ರ ಸಿಂಗ್ ತೋಮರ್ ಮತ್ತು ಪೀಯೂಷ್ ಗೋಯಲ್ ಅವರು ಹೊಸ ಕೃಷಿ ಕಾನೂನುಗಳು ಮತ್ತು ರೈತರ ಬೇಡಿಕೆಗಳ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ಅದನ್ನು ಕೇಳಬೇಕು’ ಎಂದು ಉಭಯ ಸಚಿವರ ಪತ್ರಿಕಾಗೋಷ್ಠಿಯ ವಿಡಿಯೊ ಲಿಂಕ್‌ ಸಹಿತ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರತಿಭಟನೆ ಬಿಟ್ಟು ಮುಂದಿನ ಸುತ್ತಿನ ಮಾತುಕತೆಗೆ ಬರುವಂತೆ ಉಭಯ ಸಚಿವರು ರೈತರಿಗೆ ಮನವಿ ಮಾಡಿದ್ದಾರೆ.

‘ಪ್ರತಿಭಟನೆ ಕೈಬಿಟ್ಟು ಮಾತುಕತೆ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಮನವಿ ಮಾಡುತ್ತೇವೆ’ ಎಂದು ಇಬ್ಬರೂ ಸಚಿವರು ಕೇಳಿಕೊಂಡಿದ್ದಾರೆ.

ಕಾಯ್ದೆಗಳಿಗೆ ತಿದ್ದುಪಡಿ ತರುವ ಸರ್ಕಾರದ ಪ್ರಸ್ತಾವ ತಿರಸ್ಕರಿಸಿರುವ ರೈತರು ರದ್ದುಪಡಿಸಬೇಕೆಂದು ಪಟ್ಟುಹಿಡಿದಿದ್ದಾರೆ. ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿಯೂ ದೇಶದಾದ್ಯಂತ ರೈಲು ತಡೆ ಮಾಡುವುದಾಗಿಯೂ ಎಚ್ಚರಿಕೆಯನ್ನೂ ನೀಡಿದ್ದಾರೆ.

Comments are closed.