ನವದೆಹಲಿ: ನೌಕಾದಳದ ಸೀಬರ್ಡ್ನ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಶ್ರೀಕಾಂತ್ ಅವರು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ಡಿ.31ರಂದು ಸೇವೆಯಿಂದ ನಿವೃತ್ತರಾಗಬೇಕಿದ್ದ ಶ್ರೀಕಾಂತ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ಮೃತಪಟ್ಟಿದ್ದಾರೆ. ರಕ್ಷಣಾ ಸಚಿವ ರಾಜನಾಥ್ಸಿಂಗ್ ತೀವ್ರ ಸಂತಾಪ ಸೂಚಿಸಿದ್ದಾರೆ.
ನೌಕಾ ಸೀಬರ್ಡ್ನಲ್ಲಿ ಶ್ರೀಕಾಂತ್ ಅವರ ಸೇವೆ ಅವಿಸ್ಮರಣೀಯ. ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ. ಶ್ರೀಕಾಂತ್ ಅವರ ಅಗಲಿಕೆಯ ನೋವನ್ನು ಕುಟುಂಬದವರು ಹಾಗೂ ಸ್ನೇಹಿತರಿಗೆ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
Comments are closed.