ರಾಷ್ಟ್ರೀಯ

ಶಿವಮೊಗ್ಗ ಜಿಲೆಟಿನ್ ಸ್ಪೋಟದಲ್ಲಿ ಕಾರ್ಮಿಕರು ಮೃತ್ಯು: ಪ್ರಧಾನಿ ಮೋದಿ ಸಂತಾಪ

Pinterest LinkedIn Tumblr

ನವದೆಹಲಿ: ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್ ಜಿಲೆಟಿನ್ ಸ್ಪೋಟದಿಂದ ಸಾವನ್ನಪ್ಪಿದ ಕಾರ್ಮಿಕರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು,‘ಶಿವಮೊಗ್ಗದಲ್ಲಿ ನಡೆದ ಘಟನೆಯಲ್ಲಿ ಜೀವ ಹಾನಿಯಾಗಿರುವುದು ನೋವುಂಟು ಮಾಡಿದೆ. ಅವರ ಕುಟುಂಬಗಳಿಗೆ ಸಂತಾಪ ಸೂಚಿಸುವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲಾ ಸಹಕಾರ ನೀಡುತ್ತದೆ’ ಎಂದು ತಿಳಿಸಿದ್ದಾರೆ.

Comments are closed.