ರಾಷ್ಟ್ರೀಯ

ಶ್ರೀಹರಿಕೋಟಾ: ಬ್ರೆಜಿಲ್ ನ ಮೊದಲ ಉಪಗ್ರಹ ಯಶಸ್ವಿಯಾಗಿ ಉಡಾಯಿಸಿದ ಇಸ್ರೊ; ಮೋದಿ ಭಾವಚಿತ್ರ, ಭಗವದ್ಗೀತೆ ಬಾಹ್ಯಾಕಾಶಕ್ಕೆ

Pinterest LinkedIn Tumblr

ಶ್ರೀಹರಿಕೋಟಾ(ಆಂಧ್ರ ಪ್ರದೇಶ): ಅಮೆಜೋನಿಯಾ-1 ಮತ್ತು ಇತರ 18 ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ-ಸಿ51ನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೊ ಸಂಸ್ಥೆ ಭಾನುವಾರ ಯಶಸ್ವಿಯಾಗಿ ಉಡಾಯಿಸಿದೆ.

ತನ್ನ ಪಿಎಸ್‌ಎಲ್‌ವಿ 51 ರಾಕೆಟ್‌ ಮೂಲಕ ಬ್ರೆಜಿಲ್‌ ನ ಅಮೆಜೋನಿಯಾ -1 ಉಪಗ್ರಹದೊಂದಿಗೆ ಇತರ 18 ಉಪಗ್ರಹಗಳನ್ನು ಶ್ರೀಹರಿಕೋಟದಲ್ಲಿರುವ ಡಾ. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ 10:30ಕ್ಕೆ ಉಡಾವಣೆ ಮಾಡಲಾಯಿತು.

ಒಟ್ಟು 20 ಉಪಗ್ರಹಗಳನ್ನು ಇಂದು ಉಡಾವಣೆ ಮಾಡಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದಾಗಿ 2 ಉಪಗ್ರಹಗಳ ಉಡಾವಣೆಯನ್ನು ಕಳೆದ ವಾರ ರದ್ದು ಮಾಡಲಾಗಿತ್ತು.

ಭಾರತದ ಖಾಸಗಿ ಸಂಸ್ಥೆಗಳು ಅಭಿವೃದ್ಧಿಪಡಿಸಿದ ‘ಆನಂದ್’, ‘ಸತೀಶ್ ಧವನ್’ ಹಾಗೂ ‘ಯೂನಿಟಿಶಾಟ್’ ಉಪಗ್ರಹಗಳ ಜೊತೆ ಬ್ರೆಜಿಲ್ ದೇಶಕ್ಕೆ ಸೇರಿದ ಅಮೆಜೋನಿಯಾ-1 ಉಪಗ್ರಹವನ್ನು ಇಸ್ರೋ ರಾಕೆಟ್‌ ಕಕ್ಷೆಗೆ ಸೇರಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಭಾವ ಚಿತ್ರ, ಪವಿತ್ರ ಗ್ರಂಥ ಭಗವದ್ಗೀತೆಯ ಎಲೆಕ್ಟ್ರಾನಿಕ್‌ ಪ್ರತಿ ಹಾಗೂ 25 ಸಾವಿರ ನಾಗರಿಕರ ಹೆಸರು ಇರುವ ಉಪಗ್ರಹವನ್ನು ಇಂದು ಕಳುಹಿಸಲಾಯಿತು.

ಬ್ರೆಜಿಲ್‌ ನ ಅಮೆಜೋನಿಯಾ -1 ಉಪಗ್ರಹ 637 ಕೆಜಿ ತೂಕವನ್ನು ಹೊಂದಿದ್ದು, ಇದು ಬ್ರೆಜಿಲ್‌ ವ್ಯಾಪ್ತಿಯಲ್ಲಿರುವ ಅಮೆಜಾನ್‌ ಪ್ರದೇಶದ ಅರಣ್ಯ ನಾಶದ ಬಗ್ಗೆ ಮಾಹಿತಿ ನೀಡಲಿದೆ.

ಭಾರತೀಯ ಉಪಗ್ರಹಗಳಾದ ‘ಆನಂದ್’ ಅನ್ನು ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಸಂಸ್ಥೆ ‘ಪಿಕ್ಸೆಲ್’ ಅಭಿವೃದ್ದಿಪಡಿಸಿದೆ. ‘ಸತೀಶ್ ಧವನ್’ ಅನ್ನು ಚೆನ್ನೈ ಮೂಲದ ‘ಸ್ಪೇಸ್ ಕಿಡ್ಜ್‌ ಇಂಡಿಯಾ ಅನ್ನು ಜಿಟ್ ಶಾಟ್ (ಶ್ರೀಪೆರಂಬುದೂರ್), ಜಿಹೆಚ್ಆರ್ ಸಿ ಈ ಶಾಟ್ (ನಾಗ್ಪುರ), ಶ್ರೀ ಶಕ್ತಿ ಶಾಟ್ (ಕೊಯಮತ್ತೂರು) ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ.

ಸ್ಪೇಸ್‌ಕಿಡ್ಜ್ ಇಂಡಿಯಾ ಭಾರತದ ಪ್ರಸಿದ್ಧ ಬಾಹ್ಯಕಾಶ ವಿಜ್ಞಾನಿ ಸತೀಶ್ ಧವನ್ ಅವರ ಹೆಸರಿನಲ್ಲಿ ʼಸತೀಶ್ ಧವನ್ʼ ಉಪಗ್ರಹವನ್ನು ಅಭಿವೃದ್ಧಿ ಪಡಿಸಿದೆ. ತನ್ನ ಮೊದಲ ಉಪಗ್ರಹ ಇದಾಗಿರುವ ಕಾರಣ ಇದರಲ್ಲಿ ಪ್ರಧಾನಿ ಮೋದಿಯವರ ಭಾವ ಚಿತ್ರವನ್ನು ಉಪಗ್ರಹದಲ್ಲಿ ಕಳುಹಿಸುವುದಾಗಿ ಸಂಸ್ಥೆಯ ಸಿಇಓ ಡಾ.ಶ್ರೀಮತಿ ಕೇಸನ್ ಉಡಾವಣೆಗೂ ಮೊದಲು ತಿಳಿಸಿದ್ದರು. ಉಪಗ್ರಹದ ಪ್ಯಾನೆಲ್‌ಗೆ ಮೋದಿಯವರ ಫೋಟೋ ಇರಲಿದೆ. ಜೊತೆಗೆ ‘ಆತ್ಮನಿರ್ಭರ್ ಮಿಷನ್’ ವಾಕ್ಯಗಳ ಜೊತೆಗೆ ಧರ್ಮಗ್ರಂಥ ಭಗವದ್ಗೀತೆಯ ಎಲೆಕ್ಟ್ರಾನಿಕ್‌ ಪ್ರತಿ, 25 ಸಾವಿರ ದಿಯ ಹೆಸರುಗಳನ್ನು ಕೊಂಡೊಯ್ಯಲಿದೆ ಎಂದು ಅವರು ವಿವರಿಸಿದ್ದಾರೆ.

ಬಾಹ್ಯಾಕಾಶ ವಿಜ್ಞಾನದ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ಹೆಸರುಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ನಾವು ಮನವಿ ಮಾಡಿದ್ದೆವು. ಒಂದು ವಾರದಲ್ಲಿ 25 ಸಾವಿರ ಹೆಸರುಗಳು ನೋಂದಣಿಯಾದವು. ಈ ಪೈಕಿ 1 ಸಾವಿರ ವಿದೇಶಿಯರು ನೊಂದಣಿ ಮಾಡಿದ್ದಾರೆ. ಚೆನ್ನೈನ ಒಂದು ಶಾಲೆಯ ತನ್ನ ಎಲ್ಲ ವಿದ್ಯಾರ್ಥಿಗಳ ಹೆಸರನ್ನು ಕಳುಹಿಸಿದೆ. ಈ ಹೆಸರುಗಳೊಂದಿಗೆ ನಾವು ಮೋದಿಯವರ ಫೋಟೋವನ್ನು ಕಳುಹಿಸುತ್ತಿದ್ದೇವೆ. ಕೆಲ ವಿದೇಶಿ ಪ್ರಯೋಗಗಳಲ್ಲಿ ಆಯಾ ದೇಶಗಳು ಬೈಬಲ್‌ನ್ನು ಬಾಹ್ಯಾಕಾಶಕ್ಕೆ ಕಳುಹಿಸಿದ್ದವು. ಹಾಗಾಗಿ ನಮ್ಮ ದೇಶದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ನಭಕ್ಕೆ ಕಳುಹಿಸಲು ನಾವು ಮುಂದಾಗಿದ್ದೇವೆ ಎಂದು ಡಾ. ಶ್ರೀಮತಿ ಮಾಹಿತಿ ನೀಡಿದ್ದಾರೆ.

ಪ್ಯಾನೆಲ್‌ ಕೆಳಗಡೆ ಇಸ್ರೋ ಅಧ್ಯಕ್ಷ ಶಿವನ್‌ ಮತ್ತು ವೈಜ್ಞಾನಿಕ ಕಾರ್ಯದರ್ಶಿ ಡಾ.ಆರ್.ಉಮಾಮಹೇಶ್ವರನ್ ಅವರ ಹೆಸರು ಇರಲಿದೆ. ಉಪಗ್ರಹದಲ್ಲಿರುವ ಎಲೆಕ್ಟ್ರಾನಿಕ್ಸ್ ಮತ್ತು ಸರ್ಕ್ಯೂಟ್‌ ಸೇರಿದಂತೆ ಸೇರಿದಂತೆ ಎಲ್ಲವನ್ನೂ ಭಾರತದಲ್ಲಿ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

Comments are closed.