ರಾಷ್ಟ್ರೀಯ

ಆಟೋಗೆ ಲಾರಿ ಡಿಕ್ಕಿ; 6 ಮಂದಿ ಕೂಲಿಕಾರ್ಮಿಕರು ಬಲಿ, 7 ಮಂದಿ ಗಂಭೀರ

Pinterest LinkedIn Tumblr

ಹೈದರಾಬಾದ್: ಆಟೋಗೆ ಲಾರಿ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ 6 ಮಂದಿ ಕೂಲಿಕಾರ್ಮಿಕರು ಸಾವನ್ನಪ್ಪಿದ್ದು, 7 ಮಂದಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಗೊಲ್ಲಪಲ್ಲಿಯ ಬಳಿ ನಡೆದಿದೆ.

ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಈ ಭೀಕರವಾದ ಅಪಘಾತ ಸಂಭವಿಸಿದೆ. ಗಾಯಳುಗಳನ್ನು ವಿಜಯವಾಡ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.

14 ಮಂದಿ ಕಾರ್ಮಿಕರು ಆಟೋ ಮೂಲಕವಾಗಿ ಕೆಲಸ ಮಾಡುತ್ತಿದ್ದ ಜಾಗಕ್ಕೆ ಹೋಗುತ್ತಿದ್ದರು. ಈ ವೇಳೆ ಲಾರಿಯೊಂದು ಬಂದು ಗುದ್ದಿದೆ. ಲಾರಿ ಗುದ್ದಿದ ರಭಸಕ್ಕೆ ಆಟೋ ನುಜ್ಜುಗುಜ್ಜಾಗಿದೆ. 6 ಮಂದಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. 7 ಜನರನ್ನು ಆಸ್ಪತ್ರೆಗೆ ದಾಖಲಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Comments are closed.