ಅಂತರಾಷ್ಟ್ರೀಯ

ವಿದೇಶದಲ್ಲಿ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಮಾನವೀಯತೆ ಮೆರೆದ ಬೆಂಗಳೂರು ಮೂಲದ ವಿದ್ಯಾರ್ಥಿ

Pinterest LinkedIn Tumblr

ವಿನ್ಯೂಯಾರ್ಕ್, ಮಾ.8-  ಇಲ್ಲಿನ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿ ಅನಾರೋಗ್ಯದಿಂದ ಸಾವನ್ನಪ್ಪಿದ ಬಳಿಕ ತನ್ನ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾನೆ.

ಮೂಲತಃ ಬೆಂಗಳೂರಿನ ಬೊಮ್ಮಸಂದ್ರ ನಿವಾಸಿ ಆಗಿರುವ ರಾಜೀವ್ ನಾಯ್ಡು ಅಂಗಾಂಗ ದಾನ ಮಾಡಿರುವ ಭಾರತೀಯ ವಿದ್ಯಾರ್ಥಿ.ನ್ಯೂಯಾರ್ಕ್ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದ ರಾಜೀವ್ ಕಳೆದ 26ರಂದು ಶ್ವಾಸಕೋಶದ ಸೋಂಕಿನಿಂದಾಗಿ ಇಲ್ಲಿನ ಬ್ರೂಕ್‌ಲಿನ್ ಆಸ್ಪತ್ರೆಗೆ ದಾಖಲಾಗಿದ್ದರು.

ಚಿಕಿತ್ಸೆಯಿಂದ ಚೇತರಿಸಿಕೊಳ್ಳದ ರಾಜೀವ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರಿಂದ ವಿಷಯ ಅರಿತ ಸಂಬಂಧಿಕರು ಅಂಗಾಂಗ ದಾನ ಮಾಡಿದ್ದಾರೆ. ಅನಾರೋಗ್ಯದಿಂದ ರಾಜೀವ್ ಆಸ್ಪತ್ರೆಗೆ ದಾಖಲಾದ ನಂತರ ಅವರ ಸೋದರಿಯ ಗಂಡ ನ್ಯೂಯಾರ್ಕ್‌ಗೆ ಆಗಮಿಸಿ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದರು. ರಾಜೀವ್ ಅವರ ಕಿಡ್ನಿ , ಲಿವರ್, ಕಣ್ಣು, ಹೃದಯ ಸೇರಿದಂತೆ ಎಲ್ಲ ಅಂಗಾಂಗಳನ್ನು ದಾನ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ರಾಜೀವ್ ಅವರ ಪಾರ್ಥಿವ ಶರೀರವನ್ನು ನ್ಯೂಯಾರ್ಕ್‌ನಿಂದ ನಗರಕ್ಕೆ ತರಲಾಗುತ್ತಿದ್ದು, ನಾಳೆ ಆಗಮಿಸಲಿದೆ ಎಂದು ಹೇಳಲಾಗಿದೆ.

Write A Comment