ಲಂಡನ್: ಕಾಫಿ ಡೇ ಉದ್ಯಮಿ ಸಿದ್ಧಾರ್ಥ್ ಗೆ ಆದ ಪರಿಸ್ಥಿತಿಯೇ ನನಗೂ ಆಗುತ್ತಿದೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.
ಭಾರತೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ಸಾಲ ಪಡೆದು, ಮರುಪಾವತಿ ಮಾಡದೇ ಲಂಡನ್ ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ವಿಜಯ್ ಮಲ್ಯ, ‘ನಾನು ವಿ.ಜಿ ಸಿದ್ದಾರ್ಥ ಅವರೊಂದಿಗೆ ಪರೋಕ್ಷವಾಗಿ ಸಂಬಂಧ ಹೊಂದಿದ್ದೇನೆ. ಅವರೊಬ್ಬ ಒಳ್ಳೆಯ ವ್ಯಕ್ತಿ ಹಾಗೂ ಉತ್ತಮ ಉದ್ಯಮಿ. ಅವರ ಪತ್ರದಲ್ಲಿರೋ ಸಾರಾಂಶ ನೋಡಿ ನನ್ನ ಹೃದಯ ನುಚ್ಚುನಾರಾಯ್ತು. ಸರ್ಕಾರಿ ಏಜೆನ್ಸಿಗಳು ಹಾಗೂ ಬ್ಯಾಂಕ್ ಗಳು ಎಂಥವರನ್ನೂ ಹತಾಶೆಗೆ ದೂಡಿಬಿಡುತ್ತವೆ. ನಾನು ಸಂಪೂರ್ಣ ಸಾಲ ಮರುಪಾವತಿ ಮಾಡುತ್ತೇನೆ ಎಂದರೂ ನನಗೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಹೇಳಿದ್ದಾರೆ.
ಅಂತೆಯೇ ಮತ್ತೊಂದು ಟ್ವೀಟ್ ನಲ್ಲಿ ವಿದೇಶಗಳಲ್ಲಿ ಅಲ್ಲಿನ ಸರ್ಕಾರ ಮತ್ತು ಬ್ಯಾಂಕ್ ಗಳು ಸಾಲಗಾರರು ಮಾಡಿದ ಸಾಲ ತೀರಿಸುವಲ್ಲಿ ಸಹಾಯ ಮಾಡುತ್ತವೆ. ಆದರೆ ನನ್ನ ವಿಚಾರದಲ್ಲಿ ಇದು ತದ್ವಿರುದ್ಧವಾಗಿದೆ. ನಾನು ಸಾಲ ತೀರಿಸಲು ಮಾಡಿದ ಪ್ರತಿ ಪ್ರಯತ್ನದಲ್ಲೂ ಸರ್ಕಾರ ಮತ್ತು ಬ್ಯಾಂಕ್ ಗಳು ತಡೆಗೋಡೆಯಾಗಿ ನಿಂತಿವೆ ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.
I am indirectly related to VG Siddhartha. Excellent human and brilliant entrepreneur. I am devastated with the contents of his letter. The Govt Agencies and Banks can drive anyone to despair. See what they are doing to me despite offer of full repayment. Vicious and unrelenting.
— Vijay Mallya (@TheVijayMallya) July 30, 2019
In Western Countries, Government and Banks help borrowers repay their debts. In my case they are obstructing every possible effort for me to repay my debt whilst competing for my assets. As far as the prima facie criminal case goes wait for the appeal granted.
— Vijay Mallya (@TheVijayMallya) July 30, 2019
Comments are closed.