ಕರಾವಳಿ

ಅಕೇಶಿಯಾ ಮರದ ದಿಮ್ಮಿ ಪತ್ತೆ : ಇಬ್ಬರು ಅರೋಪಿಗಳ ಬಂಧನ.

Pinterest LinkedIn Tumblr

Acacia_timber_twoareests_1

ಬಂಟ್ವಾಳ : ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಸಮೀಪದ ಉರ್ಬನ ಎಂಬಲ್ಲಿ ಅರಣ್ಯ ಸಂಶೋಧನಾ ನೆಡುತೋಪಿನಲ್ಲಿ ಅಕ್ರಮವಾಗಿ ಕಡಿದು ಹಾಕಲಾದ ಅಕೇಶಿಯಾ ಮರದ ದಿಮ್ಮಿಗಳನ್ನು ಸೋಮವಾರ ರಾತ್ರಿ ಅರಣ್ಯಾಧಿಕಾರಿಗಳು ಪತ್ತೆ ಹಚ್ಚಿ ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನೇಶ್, ಆನಂದ ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಗೋಪಾಲ, ಹರೀಶ್, ಶೇಖರ್ ಎಂಬವರು ತಲೆಮರೆಸಿಕೊಂಡಿರುತ್ತಾರೆ.

ಈ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಬಂಟ್ವಾಳ ವಲಯ ಅರಣ್ಯಾಧಿಕಾರಿ ಎನ್.ಸುಬ್ರಹ್ಮಣ್ಯ ರಾವ್‌ರವರ ನೇತೃತ್ವದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಎಂ.ಬಿ.ಪೂವಪ್ಪ , ಸೀತಾರಾಮ ಶೆಟ್ಟಿ , ಅರಣ್ಯ ರಕ್ಷಕರಾದ ವಿನಯ ಕುಮಾರ್, ಭಾಸ್ಕರ್ ಹಾಗೂಸ ಚಾಲಕ ಜಯಪ್ರಕಾಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Write A Comment