ಮಂಗಳೂರು ಸೆಪ್ಟೆಂಬರ್17 :ಮಂಗಳೂರು ಪುರಭವನಕ್ಕೆ 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಪುರಭವನದ ಆಧುನೀಕರಣ ಮತ್ತು ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಮುಂದಿನ 2 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮೇಯರ್ ಮಹಾಬಲ ಮಾರ್ಲ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಪುರಭವನಕ್ಕೆ ಸಂಪೂರ್ಣ ಎ.ಸಿ.ಅಳವಡಿಕೆ, ನೆಲಹಾಸು, ಹೊರಭಾಗದಲ್ಲಿ ಗ್ರಾನೈಟ್ ಅಳವಡಿಕೆ, ಆಕರ್ಷಕ ಬಾಗಿಲು , ವಿಐಪಿ ಕೊಠಡಿ, ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು. ಸುಮಾರು 2 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು,ಡಿಸೆಂಬರ್ 29 ರಂದು ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಜೆ.ಆರ್.ಲೋಬೋ,ಉಪಮೇಯರ್ ಕವಿತಾ,ಅಯುಕ್ತ ಗೋಕುಲದಾಸ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.


