ಬಂಟ್ವಾಳ : ಮಂಗಳೂರಿನಲ್ಲಿ ಜರಗಿದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬಂಟ್ವಾಳ ತಾಲೂಕು ವಾಮದಪದವು ಹಾಲು ಉತ್ಪಾದಕ ಸಂಘವನ್ನು ದ.ಕ.ಜಿಲ್ಲೆಯ 2013-14 ನೇ ಸಾಲಿನ ಉತ್ತಮ ಸಂಘ ಎಂದು ಫೋಷಿಸಿ ಪ್ರಥಮ ಸ್ಥಾನ ನೀಡಿ ಗೌರವಿಸಲಾಯಿತು.
ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಗೋಪಾಲ ಕೃಷ್ಣ ಚೌಟ ಮತ್ತು ಕಾರ್ಯನಿರ್ವಹಣಾಧಿಕಾರಿ ನಾರಾಯಣ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕೇಂದ್ರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರು ಉಪಸ್ಥಿತರಿದ್ದರು.