ಮಂಗಳೂರು: ನಗರದ ಪಂಪ್ವೆಲ್ನ ಕಾಲೇಜೊಂದರ ಆರು ಮಂದಿ ವಿದ್ಯಾರ್ಥಿಗಳಿಗೆ ಗುರುವಾರ ಮಧ್ಯಾಹ್ನ ನಡೆದಿದ್ದ ಹಲ್ಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಬಜರಂಗ ದಳದ 9 ಮಂದಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಗುರುವಾರ ಮಧ್ಯಾಹ್ನ ಖಲಂದರ್ ಶಾಹಿದ್, ಶಮೀಮ್, ಮಹಮ್ಮದ್ ಶಾಹಿದ್, ಅಶೀಕ್, ಅಶ್ಪತುಲ್ಲಾ ಹಾಗೂ ಶಬಾಜ್ ಎಂಬವರಿಗೆ ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಪ್ರತೀಶ್ ಕುಮಾರ್ ಹಾಗೂ ಇತರ 15 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಗುರುವಾರ ರಾತ್ರಿಯೇ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಆರು ಮಂದಿಯನ್ನು ಶುಕ್ರವಾರ ವಶಕ್ಕೆ ಪಡೆಯಲಾಗಿದೆ. ಬಜರಂಗದಳದ ಭುಜಂಗ ಕುಲಾಲ್, ಪುನೀತ್, ಪ್ರಮೋದ್ ಸುವರ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಇದೇ ಸಂದರ್ಭದಲ್ಲಿ ಈ ಪ್ರಕರಣದಲ್ಲಿ ಅಮಾಯಕರನ್ನು ಗುರುವಾರವೇ ಪೊಲೀಸರು ವಶಕ್ಕೆ ಪಡೆದಿದ್ದು, ಠಾಣೆಯಲ್ಲಿ ಅನಗತ್ಯವಾಗಿ ಬಂಧಿಸಿಟ್ಟಿದ್ದಾರೆ ಎಂದು ಆರೋಪಿಸಿರುವ ಬಜರಂಗದಳ ಕಾರ್ಯಕರ್ತರು ಠಾಣೆ ಎದುರು ಜಮಾಯಿಸಿ ಅಮಾಯಕರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.