ಕರಾವಳಿ

ಅಕ್ಟೋಬರ್ ಒಂದರಿಂದ ಜನತಾ ದರ್ಶನ-ರಮಾನಾಥ ರೈ

Pinterest LinkedIn Tumblr

DC_Rai_Meet_ (9)

ಮಂಗಳೂರು, ಸೆಪ್ಟೆಂಬರ್ .22 : ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಸೆಯಲ್ಲಿ ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ ಪ್ರತೀ ಬುಧವಾರ ತಮ್ಮ ನೇತೃತ್ವದಲ್ಲಿ ಎಲ್ಲಾ ತಾಲೂಕುಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಜಿಲ್ಲ ಉಸ್ತುವಾರಿ ಸಚಿವ ರಮಾನಾಥ ರೈ ಅವರು ತಿಳಿಸಿದ್ದಾರೆ.

DC_Rai_Meet_ (3)

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಬಂಧ ನಡೆದ ಪೂರ್ವ ಭಾವೀ ಸಭೆಯಲ್ಲಿ ತಿಳಿಸಿದರು. ಅಕ್ಟೋಬರ್ 1 ರಂದು ಬೆಳ್ತಂಗಡಿಯಲ್ಲಿ ಜನತಾ ದರ್ಶನ ಕಾರ್ಯಕ್ರಮ  ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಜನತಾ ದರ್ಶನದಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಅಲ್ಲಿಯೇ ಪರಿಹರಿಸಬೇಕು.ಇಲ್ಲಿ ಮುಂದಿನ ಜನತಾ ದರ್ಶನದ ಹೊತ್ತಿಗೆ ಪರಿಹರಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

DC_Rai_Meet_ (10)

ಸಭೆಯಲ್ಲಿ ಶಾಸಕ ಜೆ.ಆರ್.ಲೋಬೋ,ಮೊದಿನ್ ಬಾವಾ,ಐವನ್ ಡಿ ಸೋಜಾ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪ, ಮೇಯರ್ ಮಹಾಬಲ ಮಾರ್ಲ,ಉಪ ಮೇಯರ್ ಸವಿತಾ, ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಮುಂತಾದವರು ಹಾಜರಿದ್ದರು.

Write A Comment