ಮಂಗಳೂರು, ಸೆ.23 : ಬಿಜೆಪಿ ಮಂಗಳೂರು ನಗರ ದಕ್ಷಿಣ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಪಕ್ಷದ ಕಚೇರಿಯಲ್ಲಿ ಜರಗಿತು.
ಪ್ರದಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್ ಸ್ವಾಗತಿಸಿದರು. ಅಧ್ಯಕ್ಷೆ ಕಾತ್ಯಾಯಿನಿ ರಾವ್ ಪ್ರಸ್ತಾವಣೆಗೈದರು.
ಬಿಜೆಪಿ ಮಂ.ನ.ಅಧ್ಯಕ್ಷ ರವಿಶಂಕರ ಮಿಜಾರ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಪ್ರಭಾಮಾಲಿನಿ ಮತ್ತು ರಾಜ್ಯ ಪರಿಷತ್ ಸದಸ್ಯೆ ಉಮಾವತಿ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಿಳಾ ಮೋರ್ಚಾ ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ರೂಪಾ ಡಿ. ಬಂಗೇರ ಮತ್ತು ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಕ್ಷೆ ಪುಷ್ಪಲತಾ ಗಟ್ಟಿ ಸರಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಮತ್ತು ಶಾಲಾ ಕಾಲೇಜುಗಳಲ್ಲಿ ಹದಿಹರೆಯದ ಮಕ್ಕಳಿಗೆ ಸೆಮಿನಾರ್ ನಡೆಸುವ ಬಗ್ಗೆ ಮಾಹಿತಿ ನೀಡಿದರು. ಕಾರ್ಯದರ್ಶಿ ಅರುಣಾ ನಾಗರಾಜ್ ನಿರೂಪಣೆಗೈದರು. ಉಪಾಧ್ಯಕ್ಷೆ ರಂಜಿನಿ ವಂದಿಸಿದರು.