ಕರಾವಳಿ

ಸೆ.30: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಸಾಧಕರಿಗೆ ಸನ್ಮಾನ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ 160ನೇ ವರ್ಷದ ಜಯಂತಿ ಉತ್ಸವ

Pinterest LinkedIn Tumblr

bjp_logo_india

ಮಂಗಳೂರು,ಸೆ.26 : ದ.ಕ.ಜಿಲ್ಲೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ದಿನಾಂಕ 30-9-2014ರಂದು ಮಧ್ಯಾಹ್ನ 2.30 ಗಂಟೆಗೆ ಮಂಗಳೂರಿನ ಸಿ.ವಿ.ನಾಯಕ್ ಹಾಲ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 160ನೇ ವರ್ಷದ ಜಯಂತಿ ಉತ್ಸವ ಮತ್ತು ಹಿಂದುಳಿದ ವರ್ಗಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲು ಉದ್ಘಾಟಿಸಲಿದ್ದಾರೆ.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷರಾದ ಮಾಜಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ನಾಯಕರು, ಜಿಲ್ಲಾ ನಾಯಕರು, ಶಾಸಕರು, ಮಾಜಿ ಶಾಸಕರು, ಪಕ್ಷದ ಎಲ್ಲಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ನ್ಯಾಯವಾದಿ ಶ್ರೀ ಮೋಹನ್‌ರಾಜ್ ಕೆ.ಆರ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Write A Comment