ಕರಾವಳಿ

ಉಡುಪಿ ಜಿಲ್ಲೆಗೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಉಪಸ್ಥಿತಿ

Pinterest LinkedIn Tumblr

 

12Siddaramaiah

ಉಡುಪಿ: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ  ಶನಿವಾರ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಘೊಳ್ಳಲಿದಾರೆ.

ಬೆಳಿಗ್ಗೆ 10 ಗಂಟೆಗೆ ಬ್ರಹ್ಮಾವರದ ಬೆಣ್ಣೆಕುದ್ರು ಶ್ರೀ ಕುಲಮಾಹಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ನವೀಕರಿಸಿದ್ಸ ‘ಗುರುಪೀಠ ಉದ್ಘಾಟನೆ’ ಸಮಾರಂಭದಲ್ಲ್ಲಿ ಪಾಲ್ಗೊಂಡು ಬಳಿಕ ಬ್ರಹ್ಮಾವರ ಗಾಂಧೀಮೈದಾನದಲ್ಲಿ ನಡೆಯುವ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣಾ ಸಮಾರಂಭದಲ್ಲಿ ಪಾಲ್ಘೊಳ್ಳಲಿದ್ದಾರೆ. ಈ ವೇಳೆ ವಿವಿಧ ಸಚಿವರು, ರಾಜ್ಯಮಟ್ಟದ ಹಲವು ನಾಯಕರು, ಸ್ಥಳೀಯ ಕ್ಷೇತ್ರಗಳ ಶಾಸಕರು, ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.

ಉಡುಪಿ ಕಾರ್ಯಕ್ರಮ: ಶನಿವಾರ ಮಧ್ಯಾಹ್ನ ಉಡುಪಿಯಲ್ಲಿ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುಖ್ಯಮಂತ್ರಿ ಸಂಜೆ ಮಂಗಳೂರಿಗೆ ಹೋಗುವ ದಾರಿಯಲ್ಲಿ ನಗರಾಭಿವೃದ್ಧಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾಪು ಶಾಸಕ ವಿನಯ ಕುಮಾರ್‌ ಸೊರಕೆ ಅವರ ಮುತುವರ್ಜಿಯಿಂದ ನೂತನವಾಗಿ ನಿರ್ಮಿಸಲಾದ ಕಾಪು ಬ್ಲಾಕ್‌ ಕಾಂಗ್ರೆಸ್‌ನ ಅಧಿಕೃತ ಕಚೇರಿ ‘ರಾಜೀವ ಭವನ’ ಕಟ್ಟಡವನ್ನು ಸಂಜೆ 3.30ಕ್ಕೆ ಉದ್ಘಾಟಿಸಲಿದ್ದಾರೆ.

 

Write A Comment