ಮಂಗಳೂರು : ನಿಟ್ಟೆ ಸಮೂಹ ಸಂಸ್ಥೆಯ ಅಂಗ ಸಂಸ್ಥೆ ಕೆ.ಎಸ್.ಹೆಗ್ಡೆ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ “ಹೃದಯದ ಆರೋಗ್ಯದ ಬಗ್ಗೆ ಜನ ಜಾಗೃತಿ ಮೂಡಿಸಲು “ಹೃದಯ ಕ್ಷೇಮ ನಡಿಗೆ” ಕಾರ್ಯಕ್ರಮ ಅದಿತ್ಯವಾರ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಅವರು “ಹೃದಯ ಕ್ಷೇಮ ನಡಿಗೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ಜೆ.ಆರ್.ಲೋಬೋ ಮುಖ್ಯ ಅತಿಥಿಗಳಾಗಿದ್ದರು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ “ಧೂಮಪಾನ ಹೃದಯಕ್ಕೆ ಮಾರಕ – ಕೊಬ್ಬು ರಹಿತ ಅಹಾರ ಹೃದಯಕ್ಕೆ ಪೂರಕ” ಎಂಬ ಘೋಷಣೆ ಮಾಡುವ ಮೂಲಕ ಈ ನಡಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಲ್ಲಿ ಆರೋಗ್ಯದ ಅರಿವು ಮೂಡಿಸುವ ಕಾರ್ಯ ಮಾಡಿದರು.
ಸಂಸ್ಥೆಯ ಅಧ್ಯಕ್ಷ ನಿಟ್ಟೆ ವಿನಯ ಹೆಗ್ಡೆ ಸ್ವಾಗತಿಸಿದರು. ಮಂಗಳೂರು ನಗರ ಪೊಲೀಸ್ ಕಮಿಷನರ್ ಆರ್.ಹಿತೇಂದ್ರ, ಡಾ. ಶಾಂತರಾಮ್ ಶೆಟ್ಟಿ, ಹಾಗೂ ಅಸ್ಪತ್ರೆಯ ಇತರ ವೈಧ್ಯಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.