ಕರಾವಳಿ

ಶ್ರೀ ವಾಗೀಶ್ವರೀ ಯಕ್ಷಗಾನ ಕಲಾ ವರ್ಧಕ ಸಂಘದ ವತಿಯಿಂದ ಹವ್ಯಾಸಿ ಯಕ್ಷಗಾನ ಕಲಾವಿದ ಪಿ.ವಿ. ಪರಮೇಶ್ ಅವರಿಗೆ ಸನ್ಮಾನ.

Pinterest LinkedIn Tumblr

kadri_kallkura_snmaman_1

ಮಂಗಳೂರು,ಅ.06: ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ವತಿಯಿಂದ ಹವ್ಯಾಸಿ ಯಕ್ಷಗಾನ ಕಲಾವಿದ ಪಿ.ವಿ. ಪರಮೇಶ್ ಅವರನ್ನು ಸನ್ಮಾನಿಸಲಾಯಿತು. ನಗರದ ರಥಬೀದಿಯ ಶ್ರೀ ಮಹಾಮಾಯೀ ದೇವಸ್ಥಾನದ ಆವರಣದಲ್ಲಿ ಜರಗಿದ ಈ ಸಮಾರಂಭದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ವಹಿಸಿದ್ದರು.

ಶ್ರೀನಾಥ್ ಪ್ರಭು ಮುಖ್ಯ ಅತಿಥಿಗಳಾಗಿದ್ದರು. ಈ ಸಂದರ್ಭದಲ್ಲಿ ಅಶ್ವಥಾಮರಾವ್, ನಾಗೇಶ ಪ್ರಭು, ಪ್ರಭಾಕರ ಕಾಮತ್, ಸಂಜಯ್ ಕುಮಾರ್, ಕದ್ರಿ ನವನೀತ ಶೆಟ್ಟಿ, ಉಪಸ್ಥಿತರಿದ್ದರು.

ಸನ್ಮಾನ ಸಮಾರಂಭದ ಬಳಿಕ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಸುದರ್ಶನ ವಿಜಯ – ಭಾರ್ಗವ ವಿಜಯ ಅಗ್ರಪೂಜೆ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

Write A Comment