ಮಂಗಳೂರು,ಅ.07: ಕೇಂದ್ರ ರೈಲ್ವೇ ಸಚಿವ ಡಿ.ವಿ.ಸದಾನಂದ ಗೌಡ ಅವರ ಸಹೋದರಿ ಯಳಂದೂರು ಜಿಲ್ಲಾ ಪಂಚಾಯತ್ ಸದಸ್ಯೆ ಸಾವಿತ್ರಿ ಶಿವರಾಂ ಅವರು ಮಂಗಳವಾರ ನಿಧನ ಹೊಂದಿದ್ದಾರೆ.
ಸಾವಿತ್ರಿ ಅವರಿಗೆ 60 ವರ್ಷ ಪ್ರಾಯವಾಗಿದ್ದು, ಕೆಲ ಸಮಯಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದು ,ಮಂಗಳೂರಿನ ಕೆ.ಎಮ್.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಅದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಸಚಿವ ಡಿವಿ ಸದಾನಂದ ಗೌಡ ಅವರು ಕೆ.ಎಮ್.ಸಿ ಅಸ್ಪತ್ರೆಗೆ ಭೇಟಿ ನೀಡಿದರು.