ಮಂಗಳೂರು,ಆ.07 : ಇಂಚೋನ್ ಏಷ್ಯನ್ ಗೇಮ್ಸ್ನ ರಿಲೇಯಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನ ಹಾಗೂ 400 ಮೀ.ನಲ್ಲಿ ಕಂಚಿನ ಪದಕ ಗೆದ್ದ ಅತ್ಲೆಟಿಕ್ಸ್ ಎಂ.ಆರ್.ಪೂವಮ್ಮ ಮಂಗಳವಾರ ಮಂಗಳೂರಿಗೆ ಆಗಮಿಸಿದರು.
ಇಂದು ಮದ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪೂವಮ್ಮ ಅವರಿಗೆ ದ.ಕ.ಜಿಲ್ಲಾಡಳಿತ ಹಾಗೂ ದ.ಕ. ಜಿಲ್ಲಾ ಅತ್ಲೆಟಿಕ್ಸ್ ಅಸೋಸಿಯೇಶನ್ ಅದ್ದೂರಿ ಸ್ವಾಗತ ನೀಡಿದೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಕ್ರೀಡಾ ಸಚಿವ ಕೆ.ಅಭಯಚಂದ್ರ ಜೈನ್, ಶಾಸಕ ಜೆ.ಆರ್.ಲೋಬೋ, ಮನಪಾ ಉಪ ಮೇಯರ್ ಶ್ರೀಮತಿ ಕವಿತಾ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಜಿಲ್ಲಾ ಪಂಚಾಯಿತ್ ಅಧ್ಯಕ್ಷೆ ಆಶಾ ತಿಮ್ಮಪ್ಪ, ಮೂಡಾ ಮಾಜಿ ಅಧ್ಯಕ್ಷ ತೇಜೋಮಯ ಮತ್ತಿತರರು ಉಪಸ್ಥಿತರಿದ್ದರು.
ವಿಮಾನ ನಿಲ್ದಾಣದಿಂದ ನಗರಕ್ಕೆ ಆಗಮಿಸಿದ ಬಳಿಕ ನಗರದ ಅಂಬೇಡ್ಕರ್ ವೃತ್ತ (ಜ್ಯೋತಿ ವೃತ್ತ ) ದಿಂದ ತೆರೆದ ವಾಹನದಲ್ಲಿ ಎಂ.ಆರ್.ಪೂವಮ್ಮ ಅವರನ್ನು ಮೆರವಣಿಗೆ ಮೂಲಕ ಮಂಗಳಾ ಕ್ರೀಡಾಂಗಣಕ್ಕೆ ಕರೆ ತರಲಾಯಿತು.