ಕರಾವಳಿ

ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ : ದ್ವಿಚಕ್ರ ಸವಾರ ಗಂಭೀರ

Pinterest LinkedIn Tumblr

Talapadi_accident_Pics_1

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ತಲಪಾಡಿ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಬರಿಮಾರು ನಿವಾಸಿ ರಂಜಿತ್ ಎಂಬಾತ ಗಂಭೀರ ಗಾಯಗೊಂಡಿದ್ದು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿವಿ ಮೆಕ್ಯಾನಿಕ್ ಆಗಿರುವ ರಂಜಿತ್ ತಲಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ ತಿರುವಿನಲ್ಲಿ ಸಂಚರಿಸುತ್ತಿದ್ದಂತೆಯೇ ಹಿಂಬಂದಿಯಿಂದ ಅತೀ ವೇಗದಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ರಸ್ತೆಗೆ ಎಸೆಯಲ್ಪಟ್ಟ ಆತನ ಹೊಟ್ಟೆಯ ಮೇಲಿಂದಲೇ ಬಸ್ಸಿನ ಚಕ್ರ ಚಲಿಸಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Talapadi_accident_Pics_2

 

ತಕ್ಷಣ ಆತನನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬಂಟ್ವಾಳ ಎಸೈ ನಂದಕುಮಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿಂದೆಯೂ ಇಲ್ಲಿ ಹಲವು ಬಾರಿ ಅಪಘಾತಗಳು ನಡೆದಿದೆ. ಇದು ತೀರಾ ಅಪಾಯಕಾರಿ ಇರುವು ಆಗಿದ್ದು ಅತೀ ವೇಗದಿಂದ ವಾಹನಗಳು ಹೆದ್ದಾರಿಯಲ್ಲಿ ಸಂಚರಿಸುವುದರಿಂದ ಯಾವ ಕ್ಷಣದಲ್ಲಿ ಅಪಘಾತಗಳು ನಡೆಯುತ್ತವೆ ಎಂದು ಊಹಿಸಲು ಅಸಾಧ್ಯ.

ಸಂಚಾರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಈ ಸಂದರ್ಭ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

Write A Comment