ಕರಾವಳಿ

ಗಂಗೊಳ್ಳಿ ಗ್ರಾಮಪಂಚಾಯತ್ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹ

Pinterest LinkedIn Tumblr

ಕುಂದಾಪುರ: ಗ್ರಾಮ ಪಂಚಾಯತಿಯಲ್ಲಿ ಫಲಾನುಭವಿಗಳಿಗೆ ತೊಂದರೆ ನೀಡುತ್ತಿರುವ, ಪಂಚಾಯತ್ ಸದಸ್ಯರಿಗೆ ಅಗೌರವ ತೋರುತ್ತಿದ್ದು, ಫಲಾನುಭವಿಗಳಿಂದ ಹಣ ಸುಲಿಗೆ ಮಾಡುತ್ತಿರುವ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕೆಂದು ಪಂಚಾಯತ್ ಸದಸ್ಯರು ಆಗ್ರಹಿಸಿ, ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕೆಂದು ಒತ್ತಾಯಿಸಿದ ಘಟನೆ ನಡೆದಿದೆ.

ಗಂಗೊಳ್ಳಿಯ ಪಂಚಾಯತ್ ಸಭಾಭವನದಲ್ಲಿ ಮಂಗಳವಾರ ಜರಗಿದ ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ಈ ಸಂಬಂಧ ಭಾರಿ ಚರ್ಚೆ ನಡೆದಿದೆ.

ಗಂಗೊಳ್ಳಿ ಗ್ರಾಪಂ.ನ ಬಿಲ್ ಕಲೆಕ್ಟರ್ ಉದಯ ಎಂಬುವರು ನಿರಂತರವಾಗಿ ಗ್ರಾಪಂ ಸದಸ್ಯರಿಗೆ ಅಗೌರವ ತೋರುತ್ತಿದ್ದು, ಗ್ರಾಪಂ. ವ್ಯಾಪ್ತಿಯಲ್ಲಿನ ವಸತಿ ಹಾಗೂ ಶೌಚಾಲಯದ ಫಲಾನುಭವಿಗಳಿಗೆ ಅನಗತ್ಯ ತೊಂದರೆ ನೀಡುತ್ತಿದ್ದಾರೆ ಅಲ್ಲದೆ ಫಲಾನುಭವಿಗಳಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಪಂಚಾಯತ್ ಸದಸ್ಯರು, ಈ ಸಿಬ್ಬಂದಿ ವಿರುದ್ಧ ಕೂಡಲೇ ಶಿಸ್ತು ಕ್ರಮಕೈಗೊಳ್ಳುವ ನಿರ್ಣಯವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ಸಿಬ್ಬಂದಿ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಈಗಾಗಲೇ ದೂರು ಸಲ್ಲಿಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ಇವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

Write A Comment