ಕರಾವಳಿ

ಹಟ್ಟಿಯಂಗಡಿ ವಸತಿ ಶಾಲೆಯಲ್ಲಿ ತುಳಸಿ ಹಬ್ಬದ ಆಚರಣೆ

Pinterest LinkedIn Tumblr

ಕುಂದಾಪುರ: ಭಾರತೀಯ ಸಂಸ್ಕೃತಿ ಹಾಗೂ ಪ್ರಕೃತಿ ಆರಾಧನೆಯ ಮಹತ್ವವನ್ನು ತಿಳಿಸುವ ಸಲುವಾಗಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿಯಂಗಡಿಯಲ್ಲಿ ತುಳಸಿ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

Hattiyangadi-Tulasi_pooja (2) Hattiyangadi-Tulasi_pooja Hattiyangadi-Tulasi_pooja (1)

 

ಶ್ರೀನಿವಾಸ ಶೇಟ್ ಕುಂದಾಪುರ ಹಾಗೂ ಮಾಧವ ಶಾನುಭೋಗ ಇವರು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶಿಕ್ಷಕರಾದ ನಾರಾಯಣ ವೈಲಾಯ ಅವರು ತುಳಸಿ ಪೂಜಾ ವಿಧಿಗಳನ್ನು ನಡೆಸಿಕೊಟ್ಟರು.

ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ, ಉಪಪ್ರಾಶುಂಪಾಲರಾದ ರಾಮ ದೇವಾಡಿಗ, ಶೈಕ್ಷಣಿಕ ಸಲಹೆಗಾರರಾದ ಮೃದುಲಾ ಶಾನುಭೋಗ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದ ತುಳಸಿ ಪೂಜೆಯಲ್ಲಿ ಉಪಸ್ಥಿತರಿದ್ದರು. ಆಕರ್ಷಕ ಸಿಡಿಮದ್ದುಗಳು ವಿದ್ಯಾರ್ಥಿಗಳನ್ನು ರಂಜಿಸಿತು.

Write A Comment