ಕರಾವಳಿ

ನಂದಿತಾ ಪ್ರಕರಣ ಮುಚ್ಚಿ ಹಾಕಲು ಕಾಂಗ್ರೆಸ್ ಸರಕಾರ ಯತ್ನ: ಶೋಭಾ ಕರಂದ್ಲಾಜೆ

Pinterest LinkedIn Tumblr

shobha_Karandlaje

ಉಡುಪಿ: ನಂದಿತಾ ಸಾವಿನ ಪ್ರಕರಣವನ್ನು ರಾಜ್ಯದ ಕಾಂಗ್ರೆಸ್ ಸರಕಾರ ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಅವರು ಮಣಿಪಾಲದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಂದಿತಾ ಸಾವಿನ ಪ್ರಕರಣದ ಹಿಂದಿರುವ ಆರೋಪಿಗಳನ್ನು ರಕ್ಷಿಸಲು ಸರಕಾರ ಮುಂದಾಗಿದೆ ಎಂದು ದೂರಿದರು.

ಭೂ ಕಬಳಿಕೆ ಆರೋಪ ಹೊತ್ತ ಸಚಿವ ದಿನೇಶ್ ಗುಂಡೂ ರಾವ್ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ತಕ್ಷಣ ಸಂಪುಟದಿಂದ ಕೈ ಬಿಡಬೇಕು. ರಾಜ್ಯ ಸರಕಾರ ಶಾಲೆ, ಆಸ್ಪತ್ರೆ ಸಹಿತ ಹಲವು ಯೋಜನೆಗಳಿಗೆ ದುಡ್ಡನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

Write A Comment