ಮಂಗಳೂರು,ಡಿ.1 : ಅಖಿಲ ಭಾರತ ತುಳು ಒಕ್ಕೂಟ (ರಿ) ಇದರ ಬೆಳ್ಳಿಹಬ್ಬದ ಅಂಗವಾಗಿ ವಿಶ್ವತುಳುವೆರೆ ಪರ್ಬ 2014 ನೆನಪಿನಂಗವಾಗಿ ಬೋಳೂರು ದೋಗ್ರ ಪೂಜಾರಿ ಸ್ಮಾರಕ ಯಕ್ಷಗಾನ ಕೇಂದ್ರದ ಆಶ್ರಯದಲ್ಲಿ ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕಂಕನಾಡಿಯಲ್ಲಿ ತುಳು ತಾಳ ಮದ್ದಲೆ ಪರ್ಬ ಜರಗಿತು.
ತಾಳಮದ್ದಲೆ ಸಮಾರಂಭವನ್ನು ಒಡಿಯೂರು ಕ್ಷೇತ್ರದ ಶ್ರೀಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿದರು. ಸಮಾರಂಭದಲ್ಲಿ ಹರಿಕೃಷ್ಣ ಪುನರೂರು, ಚಂದ್ರಹಾಸ ದೇವಾಡಿಗ, ಧನಕೀರ್ತಿ ಬಲಿಪ, ಪ್ರದೀಪ್ ಕುಮಾರ್ ಕಲ್ಕೂರ, ಚಿತ್ರರಂಜನ್, ಎ.ಸಿ.ಭಂಡಾರಿ, ಅಡ್ಯಾರ್ ಮಹಾಬಲ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ದಾಮೋದರ ನಿಸರ್ಗ, ಶಶಿರಾಜ್ ಅಂಬಟ್ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಯಕ್ಷಗಾನ ಸಂಘಟಕ ತಿಮ್ಮಪ್ಪ ಗುಜರನ್ ಅವರನ್ನು ಸನ್ಮಾನಿಸಲಾಯಿತು. ಗಣೇಶ್ ಅಮೀನ್ ಸಂಕಮಾರ್ ಪ್ರಸ್ತಾವನೆಗೈದರು. ವಿ.ಜಿ.ಪಾಲ್ ಕಾರ್ಯಕ್ರಮ ನಿರ್ವಹಿಸಿದರು.