ಕರಾವಳಿ

ಕಾಂಗ್ರೆಸ್ ಪಕ್ಷದ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Pinterest LinkedIn Tumblr

ಮಂಗಳೂರು, ಏಪ್ರಿಲ್ ೧೫: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್. ಲೋಬೊ ರವರ ನೇತೃತ್ವದಲ್ಲಿ ಮಂಗಳೂರು  ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಬೋಳಾರ, ಮಂಗಳಾದೇವಿ, ಹೊಯಿಗೆ ಬಜಾರ್ ವಾರ್ಡು ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವು ತಾರೀಕು ೧೨.೦೪.೨೦೧೫ ರಂದು ಮಂಗಳಾದೇವಿ ದೇವಸ್ಥಾನದ ಸಮೀಪದಲ್ಲಿರುವ ಕಾಂತಿ ಚರ್ಚ್ ಹಾಲ್‌ನಲ್ಲಿ ನಡೆಯಿತು.

ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಶ್ರೀಮತಿ ಜೆಸಿಂತಾ ಆಲ್ಪ್ರೆಡ್ ರವರು ಶಿಬಿರವನ್ನು ಉದ್ಫಾಟಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.

cong_blood_don_1 cong_blood_don_2 cong_blood_don_3

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕ ಶ್ರೀ ಜೆ.ಆರ್. ಲೋಬೊರವರು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು, ಈ ಮುಖೇನ ಸ್ವಾಸ್ಥ ಸಮಾಜವನ್ನು ನಿರ್ಮಾಣ ಮಾಡಬಹುದು. ಮುಂದಿನ ದಿನಗಳಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಕಡೆಗಳಲ್ಲಿ ಇಂತಹ ಶಿಬಿರಗಳನ್ನು ನಡೆಸುವ ಮೂಲಕ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಜವಾಬ್ಬಾರಿಯನ್ನು ನೀಡಲಾಗುವುದು ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಐವನ್ ಡಿ.ಸೋಜರವರು ಸಂದರ್ಭೋಚಿವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಶ್ರೀಯಾನ್, ದಕ್ಷಿಣ ಬ್ಲಾಕ್ ಅಧ್ಯಕ್ಷ ನಾಗೇಂದ್ರಕುಮಾರ್, ಮನಪಾ ಸದಸ್ಯೆಯರಾದ ಕವಿತಾ ವಾಸು, ರತಿಕಲಾ, ವಾರ್ಡ್ ಅಧ್ಯಕ್ಷರಾದ ಬೆನೆಟ್ ಡಿ.ಮೆಲ್ಲೊ, ಹರೀಶ್ ಕುಂಬ್ಲೆ, ಹುಸೈನ್ ಬೋಳಾರ ಪ್ರಮುಖರಾದ ಸದಾಶಿವ ಅಮೀನ್, ಸದಾನಂದ, ದುರ್ಗಾಪ್ರಸಾದ್, ದಿನೇಶ್ ರಾವ್, ಜಯಕರ ಸಮರ್ಥ, ರಮಾನಂದ ಪೂಜಾರಿ, ಉದಯ ಬೋಳಾರ್ ಮೊದಲಾದವರು ಉಪಸ್ಥಿತರಿದ್ದರು.

Write A Comment