ಕರಾವಳಿ

ಮಂಗಳೂರಿನಿಂದ ಗಲ್ಫ್ ರಾಷ್ಟ್ರಗಳಿಗೆ ಹೆಚ್ಚಿನ ವಿಮಾನಯಾನಕ್ಕೆ ಅನುಮತಿ-ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹ: ಸಂಸದೆ ಶೋಭಾಗೆ ಅನಿವಾಸಿ ಭಾರತೀಯರಿಂದ ಮನವಿ

Pinterest LinkedIn Tumblr

IMG-20150922-WA0020

ದುಬೈ, ಸೆ.22: ಮಂಗಳೂರಿನಿಂದ ಗಲ್ಫ್ ರಾಷ್ಟ್ರಗಳಿಗೆ ಖಾಸಗಿ ವಿಮಾನ ಯಾನಕ್ಕೆ ಅನುಮತಿ ನೀಡುವಂತೆ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿರುವ ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ವಾಜೆಗೆ ಯುಎಇಯ ಮಾರ್ಗದೀಪ ಸಾಂಸ್ಕೃತಿಕ ಸಮಿತಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.

IMG-20150922-WA0019

ಕೆಲ ದಿನಗಳ ಹಿಂದೆ ಗಣೇಶೋತ್ಸವಕ್ಕಾಗಿ ದುಬೈಗೆ ಆಗಮಿಸಿದ್ದ ಶೋಭಾ ಕರಂದ್ಲಾಜೆಗೆ ಯುಎಇಯ ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಪ್ರಭಾಕರ ಅಂಬಲತೆರೆ ನೇತೃತ್ವದಲ್ಲಿ ದುಬೈ ಫೋರ್ಚುನ್ ಗ್ರೂಪ್ ಆಫ್ ಹೊಟೇಲ್ಸ್‌ನ ಚೇರ್‌ಮೆನ್ ಪ್ರವೀಣ್ ಶೆಟ್ಟಿ, ದುಬೈ ಆ್ಯಕ್ಮೆ ಬಿಲ್ಡಿಂಗ್ ಮೆಟೀರಿಯಲ್ಸ್‌ನ ಆಡಳಿತ ನಿರ್ದೇಶಕ ಹರೀಶ್ ಶೇರಿಗಾರ್, ಚಿಲ್ಲಿವಿಲಿಯ ಸತೀಶ್ ವೆಂಕಟರಮಣ ಮನವಿ ಸಲ್ಲಿಸಿದರು.

ಮಂಗಳೂರಿನಿಂದ ಗಲ್ಫ್ ರಾಷ್ಟ್ರಗಳಿಗೆ ಏರ್ ಇಂಡಿಯಾ ವಿಮಾನದ ಜೊತೆಗೆ ಖಾಸಗಿ ವಿಮಾನ ಯಾನಕ್ಕೂ ಅವಕಾಶ ಕಲ್ಪಿಸಬೇಕು. ಇದರಿಂದ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲವಾಗಲಿದೆ. ಮಂಗಳೂರಿನಲ್ಲಿರುವ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್ ಕಚೇರಿಯಲ್ಲಿ ಅನಿವಾಸಿ ಕನ್ನಡಿಗರಿಗೆ ಸೇವೆ ಪಡೆಯಲು ಅವಕಾಶ ಕಲ್ಪಿಸಬೇಕು. ಗಲ್ಫ್ ರಾಷ್ಟ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಕ್ಷಿಣ ಪಡೆಯಲು ಬೇಕಾದ ಪ್ರವೇಶ ಪರೀಕ್ಷೆಗೆ ಪರೀಕ್ಷಾ ಕೇಂದ್ರವನ್ನು ಯುಎಇಯಲ್ಲಿ ಸ್ಥಾಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

Write A Comment