ಕರಾವಳಿ

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ನಿಧನ

Pinterest LinkedIn Tumblr

Pundalika haalambi

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ನಿಧನರಾಗಿದ್ದಾರೆ.

ಕಿಡ್ನಿ ವೈಫಲ್ಯದಿಂದ ಬಸವನಗುಡಿಯ ಶೇಖರ್ ಆಸ್ಪತ್ರೆಗೆ ದಾಖಲಾಗಿದ್ದ ಹಾಲಂಬಿ ಇಂದು ಬೆಳಗ್ಗೆ 7.30ರ ವೇಳೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ ಹಾಲಂಬಿ ಅವರ ಪಾರ್ಥಿವ ಶರೀರವನ್ನು ಯಡಿಯೂರಿನಲ್ಲಿ ಅವ ನಿವಾಸದಲ್ಲಿ ಸರ್ವಾಜನಿಕ ದರ್ಶನಕ್ಕೆ ಇರಿಸಲು ಸಿದ್ಧತೆ ನಡೆಯುತ್ತಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಜನಿಸಿದ ಇವರು ಕನ್ನಡ ಸಾಹಿತ್ಯ ಪರಿಷತ್‍ನ 24ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು.

Write A Comment