ಕುಂದಾಪುರ: ಕುಂದಾಪುರ ತಾಲೂಕಿನ ಕಂಡ್ಲೂರಿನ ದೂಪದಕಟ್ಟೆ ಎಂಬಲ್ಲಿನ ಸಂತ ಅಂತೋನಿ ಪ್ರಾರ್ಥನಾ ಮಂದಿರದ ಎದುರಿಗಿರುವ ಸಂತ ಆಂತೋನಿಯವರ ಮೂರ್ತಿಯನ್ನು ಭಾನುವಾರ ತಡರಾತ್ರಿ ಕಿಡಿಗೇಡಿಗಳು ಒಡೆದು ಕೆಡವಿದ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ಕೆ.ಅಣ್ಣಾಮಲೈ ಭೇಟಿ ನೀಡಿದ್ದಾರೆ.
ಸೋಮವಾರ ರಾತ್ರಿ ವೇಳೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು ಪ್ರಾರ್ಥಾನಾ ಮಂದಿರಕ್ಕೆ ಸಂಬಂದಪಟ್ಟ ಮುಖ್ಯಸ್ಥರು ಹಾಗೂ ಧರ್ಮಗುರುಗಳೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೇದುಕೊಂಡರು. ಅಲ್ಲದೇ ಶೀಘ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಇನ್ನು ಈ ಸಂದರ್ಭ ಸ್ಥಳೀಯರು ಇಂತಹ ಘಟನೆಗಳು ಮರುಕಳಿಸದಂತೆ ಕ್ರಮಕೈಗೊಳ್ಳಬೇಕೆಂದು ಎಸ್ಪಿ ಅವರ ಗಮನಕ್ಕೆ ತಂದರು. ಕುಂದಾಪುರ ಡಿವೈಎಸ್ಪಿ ಮಂಜುನಾಥ ಶೆಟ್ಟಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಇದನ್ನೂ ಓದಿರಿ: http://kannadigaworld.com/kannada/karavali-kn/262263.html
Comments are closed.