ಮಂಗಳೂರು,ಜೂನ್.11 :ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಸಂಜೀವ ಮಂಠದೂರು ಅವರು ಅಯ್ಕೆಯಾಗಿದ್ದಾರೆ.
ಜಿಲ್ಲೆಯಲ್ಲಿ ಎರಡು ಪ್ರಬಲ ಬಣಗಳನ್ನು ಹೊಂದಿರುವ ಭಾರತೀಯ ಜನತಾ ಪಾರ್ಟಿಯಲ್ಲಿ ಕೆಲವು ದಿನಗಳಿಂದ ಅಧ್ಯಕ್ಷ ಸ್ಥಾನದ ಬಗ್ಗೆ ವ್ಯಾಪಾಕ ಚರ್ಚೆಗಳು ನಡೆದಿದ್ದು, ಇದೀಗ ಅಂತಿಮವಾಗಿ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಅವರ ನಿಕಟ ಸಂಭಂಧಿಯಾದ ಸಂಜೀವ ಮಂಠದೂರು ಅವರನ್ನು ಅಯ್ಕೆ ಮಾಡಲಾಗಿದೆ.
ಸಂಜೀವ ಮಂಠದೂರು ಅವರು ಪಕ್ಷದಲ್ಲಿ ಹಲವಾರು ಉನ್ನತ ಸ್ಥಾನಗಳನ್ನು ಹೊಂದಿದ್ದು, 2013ರಲ್ಲಿ ನಡೆದ ವಿಧಾನ ಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಫರ್ಧಿಸಿ ಸೋಲುಂಡಿದ್ದರು. ಈ ಚುನಾವಣೆಯಲ್ಲಿ ಇವರ ಪ್ರತಿಸ್ಫರ್ಧಿ ಬಿಜೆಪಿ ತೊರೆದು ಕಾಂಗ್ರೆಸ್ನಿಂದ ಸ್ಫರ್ಧಿಸಿದ್ದ ಶಂಕುತಲಾ ಶೆಟ್ಟಿಯವರು ಜಯಗಳಿಸಿದ್ದರು.
ಇದುವರೆಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಅಧ್ಯಕ್ಷರಾಗಿದ್ದ ಪ್ರತಾಪ್ ಸಿಂಹ ನಾಯಕ್ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರನ್ನು ಅಯ್ಕೆ ನಡೆದಿದೆ.
Comments are closed.