ಕರಾವಳಿ

ಅಡ್ಯಾರ್ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಸಾವು.

Pinterest LinkedIn Tumblr

valachiil_car_accdent_1

ಮಂಗಳೂರು, ಜೂ.28: ನಗರದ ಹೊರವಲಯದ ಅಡ್ಯಾರ್ ಸಮೀಪದ ವಳಚ್ಚಿಲ್‌ನಲ್ಲಿ ಇಂದು ನಡೆದ ರಸ್ತೆ ಅಪಘಾತವೊಂದರಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ವೇಗವಾಗಿ ಬಂದ ಕಾರೊಂದು ಕೆ.ಎಸ್.ಆರ್.ಟಿ.ಸಿ.ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ವಸಂತ್ ಕುಮಾರ್ (65) ಎಂದು ಗುರುತಿಸಲಾಗಿದೆ.

valachiil_car_accdent_2 valachiil_car_accdent_3 valachiil_car_accdent_4 valachiil_car_accdent_5

ಫರಂಗಿಪೇಟೆ ಕಡೆಯಿಂದ ಮಂಗಳೂರಿನತ್ತ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸು ವಳಚ್ಚಿಲ್ ಬಸ್‌ನಿಲ್ದಾಣದ ಸಮೀಪ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಸಲುವಾಗಿ ನಿಂತಿತ್ತು. ಈ ಸಂದರ್ಭ ಹಿಂದಿನಿಂದ ಅತೀ ವೇಗವಾಗಿ ಆಗಮಿಸಿದ ಕಾರು ಹಿಂಬದಿಯಿಂದ ಬಸ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಈ ಸಂದರ್ಭ ಗಂಭೀರವಾಗಿ ಗಾಯಗೊಂಡ ಕಾರು ಚಾಲಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments are closed.