ಕರಾವಳಿ

ಬಾಳಿಗ ಮರ್ಡರ್ ಕೇಸ್ : ಪ್ರಮುಖ ಆರೋಪಿಯನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಕಳಿಸಿದ ಕೋರ್ಟ್

Pinterest LinkedIn Tumblr

Naresh_shenai_Court_3

ಮಂಗಳೂರು : ಮಾರ್ಚ್ 21ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಂಗಳೂರಿನ ಆರ್ ಟಿ ಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗಾ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈಯನ್ನು ನ್ಯಾಯಾಧೀಶರ ಅದೇಶದಂತೆ ಇಂದು ಮತ್ತೆ ನ್ಯಾಯಾಲಯಕ್ಕೆ ಹಾಜಾರು ಪಡಿಸಲಾಗಿದ್ದು, ಪೊಲೀಸರ ಮನವಿ ಮೇರೆಗೆ ನ್ಯಾಯಾಧೀಶರು ಆರೋಪಿಯನ್ನು ಮತ್ತೆರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಸೂಚನೆ ನೀಡಿದ್ದಾರೆ.

ಮಾರ್ಚ್ 21ರಂದು ಹತ್ಯೆ :

ಮಾರ್ಚ್ 21ರಂದು ಮಂಗಳೂರು ನಗರದ ಬೆಸೆಂಟ್ ಕಾಲೇಜಿನ ಸಮೀಪ, ಪಿ.ವಿ.ಎಸ್.ಕಲಾಕುಂಜದ ಎದುರಿನ ಓಣಿಯೊಂದರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ಅವರ ನಿವಾಸದ ಎದುರೆ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಅಂದು ವಿನಾಯಕ ಪಾಂಡುರಂಗ ಬಾಳಿಗರವರು ಪ್ರತೀ ದಿನದಂತೆ ಬೆಳಿಗ್ಗೆ 05-45 ಗಂಟೆಗೆ ವೆಂಕಟರಮಣ ದೇವಸ್ಥಾನಕ್ಕೆ ಹೋಗಲು ತನ್ನ ಸ್ಕೂಟರ್ ಹೋಂಡಾ ಪ್ಲೆಸರ್ ಕೆ.ಎ.19.ಇ.ಡಿ 3098 ರಲ್ಲಿ ಮನೆಯಿಂದ ಹೊರಟು ಸುಮಾರು 75 ಮೀಟರ್ ದೂರ ಹೋಗುವಷ್ಟರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ತಡೆದು ನಿಲ್ಲಿಸಿದ ಮೂವರು ವ್ಯಕ್ತಿಗಳು ಯದ್ವಾತದ್ವಾ ತಲವಾರಿನಿಂದ ಕಡಿದು ಅವರು ಬಂದ ಬೈಕ್ ನಲ್ಲಿ ಪರಾರಿಯಾಗಿದ್ದರು,

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನರೇಶ್ ಶೆಣೈಯನ್ನು ಮೂರನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರು ಪಡಿಸಿಲಾಗಿದ್ದು, ಈ ಸಂದರ್ಭ ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸುವ ನಿಟ್ಟಿನಲ್ಲಿ ಪ್ರಕರಣದ ತನಿಖಾಧಿಕಾರಿ ಎ.ಸಿ.ಪಿ ತಿಲಕ್ ಚಂದ್ರ ಅವರು ನ್ಯಾಯಾಲಯದಲ್ಲಿ ಮಾಡಿರುವ ಮನವಿಯ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿ ನರೇಶ್ ಶೆಣೈಯನ್ನು ಜುಲೈ 2ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಆದೇಶ ಹೊರಡಿಸಿದೆ.

Comments are closed.