ಕರಾವಳಿ

ಮಂಗಳೂರಿನಲ್ಲಿ ಪತ್ರಿಕಾ ದಿನಾಚರಣೆ :ಸಾಮಾಜಿಕ ಜಾಲತಾಣಾಗಳು, ಮಾಧ್ಯಮ ಹಾಗೂ ಸಮಾಜ ವಿಷಯದ ಬಗ್ಗೆ ಉಪನ್ಯಾಸ

Pinterest LinkedIn Tumblr

Patrika_day_1

ವರದಿ / ಚಿತ್ರ : ಸತೀಶ್ ಕಾಪಿಕಾಡ್

ಮಂಗಳೂರು, ಜುಲೈ.01: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್‌ ವತಿಯಿಂದ ಇಂದು (ಜುಲೈ 1 ) ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನವನ್ನು ಆಚರಿಸಲಾಯಿತು.

ಮಂಗಳೂರು ನಗರ ಪೊಲೀಸ್ ಆಯುಕ್ತ ಶ್ರೀ ಚಂದ್ರಶೇಖರ್ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ಜಗನ್ನಾಥ ಶೆಟ್ಟಿ ಬಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರೋಶಿನಿ ನಿಲಯದ ಡೀನ್ ಪ್ರೊ ಜೋಸ್ಲಿನ್ ಲೋಬೋ ಅವರು ಸಾಮಾಜಿಕ ಜಾಲತಾಣಾಗಳು, ಮಾಧ್ಯಮ ಹಾಗೂ ಸಮಾಜ ವಿಷಯದ ಕುರಿತಾಗಿ ಉಪನ್ಯಾಸ ನೀಡಿದರು.

Patrika_day_2 Patrika_day_3 Patrika_day_4 Patrika_day_5 Patrika_day_6 Patrika_day_7 Patrika_day_8 Patrika_day_9 Patrika_day_10 Patrika_day_11 Patrika_day_12 Patrika_day_13 Patrika_day_14 Patrika_day_15 Patrika_day_16 Patrika_day_17 Patrika_day_18 Patrika_day_19 Patrika_day_20

ಇದೇ ಸಂದರ್ಭದಲ್ಲಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ಪತ್ರಿಕಾ ಛಾಯಾಚಿತ್ರಗ್ರಾಹಕರ ಛಾಯಾಚಿತ್ರ ಪ್ರದರ್ಶನ “ಫೋಕಸ್ ” ನ್ನು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಶಾಸಕ ಜೆ.ಆರ್.ಲೋಬೋ. ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ನಿಕ್, ಪೊಲೀಸ್ ಆಯುಕ್ತ ಚಂದ್ರಶೇಖರ್ ಮೊದಲಾದವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ರೊನಾಲ್ಡ್ ಅನಿಲ್ ಫೆರ್ನಾಂಡಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪತ್ರಿಕಾ ಭವನ ಟ್ರಸ್ಟ್‌ನ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

Comments are closed.