ಉಡುಪಿ: ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಆದೇಶವನ್ನು ವಿರೋಧಿಸಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ರೈಲು ತಡೆಗೆ ಯತ್ನಿಸಿದರು.
ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ಧಾಣದ ಬಳಿ ಸೇರಿದ್ದ ೩೦ಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರೈಲು ತಡೆಗೆ ಮುಂದಾದರು. ಈ ಸಂದರ್ಬದಲ್ಲಿ ಪ್ರತಿಭಟನಾ ಕಾರರನ್ನು ಪೊಲೀಸರು ತಡೆದರು. ಈ ಸಂದರ್ಬದಲ್ಲಿ ತಮಿಳುನಾಡು, ರಾಜ್ಯ ಸರ್ಕಾರ, ಪ್ರದಾನಿಯ ವಿರುದ್ದ ಘೋಷಣೆಯನ್ನು ಕೂಗಿದ ಪ್ರತಿಭಟನಾಕಾರರು ಪ್ರಧಾನಿ ಕಾವೇರಿ ಜಲ ವಿಚಾರದಲ್ಲಿ ಮಧ್ಯ ಪ್ರವೇಶ ಮಾದಬೇಕು ಎಂದು ಒತ್ತಾಯಿಸಿದರು. ರೈಲು ತಡೆಗೆ ಮುಂದಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
Comments are closed.