ಸುಳ್ಯ, ಅ.3: ಸೆಪ್ಟಂಬರ್ 23ರಂದು ಮಧ್ಯಾಹ್ನ ಸುಳ್ಯದ ಐವರ್ನಾಡಿನಲ್ಲಿ ಕೊಲೆಗೈಯ್ಯಲ್ಪಟ್ಟ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಕರಾವಳಿ ವಿಭಾಗದ ಅಧ್ಯಕ್ಷ ಇಸ್ಮಾಯೀಲ್ ನೇಲ್ಯಮಜಲು(52) ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿಯನ್ನು ಪೊಲೀಸರು ಬಂಧಿಸಿರುವುದಾಗಿ ಮೂಲಗಳು ತಿಳಿಸಿವೆ. ಈ ಪೈಕಿ ನಾಲ್ವರು ಹತ್ಯೆಗೆ ಸುಫಾರಿ ನೀಡಿದವರು ಹಾಗೂ ಮೂವರು ಕೊಲೆ ಆರೋಪಿಗಳು ಎಂದು ತಿಳಿದುಬಂದಿದೆ.
Comments are closed.