ಕರಾವಳಿ

ಶ್ರೀ ಗೋಕರ್ಣನಾಥ ಕ್ಷೇತ್ರ : ನವರಾತ್ರಿ ಮಹೋತ್ಸವದಲ್ಲಿ ಗಮನ ಸೆಳೆಯುತ್ತಿರುವ ಸಾಂಸ್ಕೃತಿಕ ಕಲಾವೈಭವ

Pinterest LinkedIn Tumblr

kudroli_special_1

ವರದಿ / ಚಿತ್ರ : ಸತೀಶ್ ಕಾಪಿಕಾಡ್

ಮಂಗಳೂರು,ಆಕ್ಟೋಬರ್.8 : ನವರಾತ್ರಿ ಪ್ರಯುಕ್ತ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ಮಂಗಳೂರು ದಸರಾ ಮಹೋತ್ಸವ ಕಾರ್ಯಕ್ರಮಗಳು ಬಹಳ ಅದ್ದೂರಿಯಾಗಿ ನಡೆಯುತ್ತಿದೆ. ಕ್ಷೇತ್ರದ ಆವರಣದ ಸಂತೋಷಿ ಕಲಾ ಮಂಟಪದಲ್ಲಿ ದಿನನಿತ್ಯ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆಯುತ್ತಿದ್ದು, ಕಾರ್ಯಕ್ರಮ ಹಾಗೂ ಶ್ರೀ ಕ್ಷೇತ್ರದ ಅಲಂಕಾರವನ್ನು ವೀಕ್ಷಿಸಲು ದೇಶವಿದೇಶಗಳಿಂದ ಜನರು ಆಗಮಿಸುತ್ತಿದ್ದಾರೆ.

kudroli_special_2

ಆಕ್ಟೋಬರ್ 1ರಂದು ಶಾರದಮಾತೆ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆಯೊಂದಿಗೆ ಮಂಗಳೂರೂ ನಗರ ಪೊಲೀಸ್ ಕಮಿಷನರ್ ಶ್ರೀ ಎಮ್. ಚಂದ್ರಶೇಖರ್ ಅವರು ದೀಪ ಬೆಳಗುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದ್ದರು.

ದಿನಾಂಕ 9ರಂದು ಬೆಳಿಗ್ಗೆ ಚಂಡಿಕಾ ಹೋಮ ಹಾಗೂ ಹಗಲೋತ್ಸವವು ಜರಗಲಿರುವುದು. 10ರಂದು ಮಧ್ಯಾಹ್ನ 1 ಗಂಟೆ ಮಹಾಪೂಜೆಯ ನಂತರ ಮಹಾ ಅನ್ನಸಂತರ್ಪಣೆ ನಡೆಯಲಿರುವುದು.

ನವರಾತ್ರಿ ಉತ್ಸವದ ಶೋಭಾಯಾತ್ರೆಯು ದಿನಾಂಕ 11ರಂದು ಸಂಜೆ 4 ಗಂಟೆಗೆ ಶ್ರೀ ಕ್ಷೇತ್ರದ ಆವರಣದಿಂದ ಹೊರಡಲಿದೆ.

kudroli_special_3 kudroli_special_4 kudroli_special_5 kudroli_special_6 kudroli_special_7 kudroli_special_8 kudroli_special_9 kudroli_special_10 kudroli_special_11

ಮೆರವಣಿಗೆಯಲ್ಲಿ ಶಾರದ ಮಾತೆ, ಮಹಾಗಣಪತಿ, ನವದುರ್ಗೆಯರ ಮೂರ್ತಿ ಸಹಿತ ರಾಜ್ಯದ ವಿವಿದೆಡೆಗಳಿಂದ ಬರುವ ಸುಮಾರು 75 ಕ್ಕಿಂತಲೂ ಹೆಚ್ಚಿನ ಸ್ತಬ್ದ ಚಿತ್ರಗಳ ವೈಭವಪೂರ್ಣ ಟ್ಯಾಬ್ಲೋಗಳು ಭಾಗವಹಿಸಲಿವೆ. ಜಿಲ್ಲೆಯ ಹಾಗೂ ರಾಜ್ಯದ ಮತ್ತು ಹೊರ ರಾಜ್ಯಗಳಿಂದ ಆಗಮಿಸುವ ವಿವಿಧ ಜಾನಪದ, ಸಾಂಸ್ಕೃತಿಕ ಹಿನ್ನೆಲೆಯುಳ್ಳ ನೃತ್ಯ ತಂಡಗಳು ಈ ಮೆರವಣಿಗೆಗೆ ವಿಶೇಷ ಸೊಬಗನ್ನು ನೀಡಲಿವೆ .

ಈ ಬಾರಿ ‘ಅಕ್ರೆಲಿಕ್’ (ವಿದ್ಯುತ್ ದೀಪ) ವರ್ಣಾಲಂಕಾರ ಸೊಬಗು..

ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಆಚರಿಸಲ್ಪಡುವ ಮಂಗಳೂರು ದಸರಾದ ಅಂಗವಾಗಿ ನವದುರ್ಗೆಯರು ಹಾಗೂ ಶಾರದಾ ಮಾತೆಯನ್ನು ಪ್ರತಿಷ್ಠಾಪಿಸಲಾಗುವ ದರ್ಬಾರ್ ಮಂಟಪಕ್ಕೆ ‘ಅಕ್ರೆಲಿಕ್’ ವರ್ಣಾಲಂಕಾರ ಈ ಬಾರಿಯ ವಿಶೇಷತೆಯಾಗಿದೆ.

kudroli_pratishte_8

kudroli_pratishte_9 kudroli_pratishte_10 kudroli_pratishte_12

ಕ್ಷೇತ್ರದ ನವೀಕರಣದ ರುವಾರಿ ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಕಳೆದ 26 ವರ್ಷಗಳಿಂದ ವೈಭವದ ದಸರಾ ಆಚರಣೆ ‘ಮಂಗಳೂರು ದಸರಾ’ ಎಂದೇ ಜಗತ್ಪ್ರಸಿದ್ಧಗೊಂಡಿದೆ. ದೇಶ ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಮಂಗಳೂರು ದಸರಾದ ಅಂಗವಾಗಿ ಈಗಾಗಲೇ ನಗರವು ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದೆ. ಸಂಜೆಯಾಗುತ್ತಿದ್ದಂತೆಯೇ ವಿದ್ಯುತ್ ದೀಪಗಳು ಬೆಳಗಿ ಮಂಗಳೂರು ನಗರವೇ ಝಗಮಿಸಲಾರಂಭಿಸಿದೆ. ಇದೇ ವೇಳೆ ಕುದ್ರೋಳಿ ಕ್ಷೇತ್ರವೂ ಸುಣ್ಣ ಬಣ್ಣಗಳೊಂದಿಗೆ ಹೊಸ ಮೆರುಗನ್ನು ಪಡೆದಿದೆ.

Comments are closed.