*ಯೋಗೀಶ್ ಕುಂಭಾಸಿ
ಕುಂದಾಪುರ: ನವರಾತ್ರಿಯ ವಿಶೇಷ ದಿನ ಮಹನವಮಿಯ ದಿನವಾದ ಸೋಮವಾರ ಕುಂದಾಪುರ ತಾಲೂಕಿನ ಎಲ್ಲೇಡೆ ಆಯುಧ ಪೂಜೆ ಹಾಗೂ ವಾಹನ ಪೂಜಾ ಕೈಂಕರ್ಯಗಳ ಸಂಭ್ರಮ ಜೋರಾಗಿತ್ತು.
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೋಮವಾರ ಬೆಳಿಗ್ಗೆ ಆಯುಧಪೂಜೆಯನ್ನು ಅರ್ಚಕರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಕುಂದಾಪುರ ಠಾಣಾಧಿಕಾರಿ ನಾಸೀರ್ ಹುಸೇನ್ ಹಾಗೂ ಅಪರಾಧ ವಿಭಾಗದ ಉಪನಿರೀಕ್ಷಕ ದೇವರಾಜ್ ಈ ಸಂದರ್ಭ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸರ್ವ ಸಿಬ್ಬಂಧಿಗಳು ಉಪಸ್ಥಿತರಿದ್ದು ಬಂದೂಕು ಮೊದಲಾದ ಆಯುಧ, ವಾಹನಗಳು, ಪೊಲೀಸ್ ಇಲಾಖೆಯ ವಾಹನಗಳಿಗೆ ಪೂಜೆ ಸಲ್ಲಿಸಿದರು.
ಕೊಲ್ಲೂರು, ಹಟ್ಟಿಯಂಗಡಿ ಮಾರಲದೇವಿ ದೇವಸ್ಥಾನ, ಮಂದರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ, ಕೋಟ ಅಮ್ರಥೇಶ್ವರಿ ದೇವಸ್ಥಾನ ಸೇರಿದಂತೆ ತಾಲೂಕಿನ ಪ್ರಸಿದ್ಧ ದೇವಿ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಅಧಿಕ ಸಂಖ್ಯೆಯಲ್ಲಿತ್ತು. ಇನ್ನು ವಾಹನ ಪೂಜೆಯ ನಿಮಿತ್ತ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸಾವಿರಾರು ವಾಹನಗಳಿಗೆ ಪೂಜೆ ಮಾಡಿಸಿ ಭಕ್ತರು ಪೂಜೆ ಸಲ್ಲಿಸಿದರು.
Comments are closed.