ಉಡುಪಿ: ಸಿಎ ಬ್ಯಾಂಕ್ ಸೆಕ್ಯೂರಿಟಿ ಓರ್ವನಿಗೆ ಅಪರಿಚಿತ ದುಷ್ಕರ್ಮಿಗಳು ರಾಡಿನಿಂದ ಹಲ್ಲೆ ನಡೆಸಿದ ಘಟನೆ ಉಡುಪಿಯ ಪಡುಬಿದ್ರಿ ಸಮೀಪ ತಡರಾತ್ರಿ ನಡೆದಿದೆ.
ಸ್ಥಳೀಯ ನಿವಾಸಿ ಗಂಗಾಧರ್ ಆಚಾರ್ಯ(65) ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಸೆಕ್ಯೂರಿಟಿ ಗಾರ್ಡ್. ಹಲ್ಲೆಯಿಂದ ಗಂಗಾಧರ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಪಡುಬಿದ್ರಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗಂಗಾಧರ ಅವರು ಪಡುಬಿದ್ರಿ ಸಿಎ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್ಆಗಿ ಕೆಲವಾರು ಸಮಯಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ರಾತ್ರಿ ಅಪರಿಚಿತ ನಾಲ್ವರಿಂದ ಹಲ್ಲೆ ನಡೆದಿದೆ ಎನ್ನಲಾಗಿದ್ದು ಹಲ್ಲೆ ನಡೆಸಿದ ಬಳಿಕ ಹಲ್ಲೆಕೋರರು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ. ಬ್ಯಾಂಕ್ ದರೋಡೆಗೆ ಬಂದ ದುಷ್ಕರ್ಮಿಗಳು ಈ ಕ್ರತ್ಯವೆಸಗಿದ ಬಗ್ಗೆ ಮೇಲ್ನೋಟಕ್ಕೆ ಕಂಡುಬಂದಿದ್ದು ತನಿಖೆಯ ಬಳಿಕವಷ್ಟೇ ಈ ವಿಚಾರ ತಿಳಿಯಬೇಕಿದೆ,
ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
Comments are closed.