ಕರಾವಳಿ

ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಅಮಾನತು

Pinterest LinkedIn Tumblr

nemiraj_inspectr_dismis_1

ಬೆಳ್ತಂಗಡಿ, ಅ.14: ಬೆಳ್ತಂಗಡಿ ಪೊಲೀಸ್ ಠಾಣಾ ಸರ್ಕಲ್ ಇನ್ಸ್‌ಪೆಕ್ಟರ್ ನೇಮಿರಾಜ್ ಅವರನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಲಂಚ ಕೇಳಿದ ಆರೋಪದಲ್ಲಿ ಅಮಾನತು ಮಾಡಲಾಗಿದೆ.

ಪಶ್ಚಿಮ ವಲಯ ಐಜಿಪಿಯವರು ನೇಮಿರಾಜ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ಸ್ ಪೆಕ್ಟರ್ ನೇಮಿರಾಜ್ ಅವರ ವಿರುದ್ಧ ಲಂಚ ಕೇಳಿದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿದ್ದು, ತನಿಖೆಯಲ್ಲಿ ಆರೋಪ ಮೇಲ್ನೋಟಕ್ಕೆ ಸಾಬಿತಾದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Comments are closed.