ಮಂಗಳೂರು, ಅ.16: ದ.ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಆಶ್ರಯದಲ್ಲಿ ಶನಿವಾರ ನಗರದ ಮಂಗಳ ಕ್ರೀಡಾಂಗಣದಲ್ಲಿ ಮೇಯರ್ ಕಪ್ 2016-17 ವಾಲಿಬಾಲ್ ಪಂದ್ಯಾವಳಿ ನಡೆಯಿತು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಎಂ.ಹರಿನಾಥ್ ಅವರು ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಶುಭ ಕೋರಿದರು. ಶಾಸಕ ಜೆ.ಆರ್.ಲೋಬೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜರನ್ನು ಸನ್ಮಾನಿಸಲಾಯಿತು.
ಮನಪಾ ಸದಸ್ಯ ಜಯಂತಿ ಅಚಾರ್, ದ.ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಎ.ಸುರೇಶ್ ಬಾಬು, ಕಾರ್ಯದರ್ಶಿ ಜಯಪ್ರಕಾಶ್ ರೈ ಎನ್., ಮೇಯರ್ ಕಪ್ ಪಂದ್ಯಾವಳಿ ಸಮಿತಿಯ ಸಂಚಾಲಕ ಭಾಸ್ಕರ ಶೆಟ್ಟಿ, ಖಜಾಂಚಿ ಅಹ್ಮದ್ ಮುಸ್ತಫ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Comments are closed.