ಮಂಗಳೂರು, ಅ.17: ಪ್ರಸಿದ್ದ ಪುಣ್ಯಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮವು ನವೆಂಬರ್ 24ರಿಂದ 28ರವರೆಗೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯ ಕ್ರಮಗಳು ಜರಗಲಿವೆ. ನ.24ರಂದು ಸಂಜೆ 5:30ಕ್ಕೆ ವಸ್ತು ಪ್ರದರ್ಶನದ ಉದ್ಘಾಟನೆ, ನ.26ರಂದು ಸಮ್ಮೇಳನ ಮಂಟಪದಲ್ಲಿ ಲಲಿತಕಲಾ ಗೋಷ್ಠಿ ನಡೆಯಲಿದೆ.
27ರಂದು ಸರ್ವ ಧರ್ಮ ಸಮ್ಮೇಳನ ಮತ್ತು 28ರಂದು ಸಂಜೆ ಸಾಹಿತ್ಯ ಸಮ್ಮೇಳನ ನಡೆಯಲಿದೆ. ನ.27 ಮತ್ತು 28ರಂದು ರಾತ್ರಿ ಖ್ಯಾತ ಕಲಾವಿದರಿಂದ ಸಂಗೀತ ಮತ್ತು ಭರತನಾಟ್ಯ ಕಾರ್ಯಕ್ರಮಗಳು ಜರಗಲಿವೆ ಎಂದು ಸ್ವಾಗತ ಸಮಿತಿಯ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Comments are closed.