ಕುಂದಾಪುರ: ಕಲಿಕೆಯಲ್ಲಿ ಹಿಂದುಳಿದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಕುಂದಾಪುರದ ವಡೇರಹೋಬಳಿಯ ಪಿ.ವಿ.ಎಸ್. ಸರೋಜಿನಿ ಮಧುಸೂದನ ಕುಶೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ವಿಶೇಷ ಕಲಿಕಾ ಶಿಬಿರಕ್ಕೆ ಬಂದಿದ್ದ ವಿದ್ಯಾರ್ಥಿನಿಯೋರ್ವಳೊಂದಿಗೆ ಶಾಲಾ ಮುಖ್ಯಶಿಕ್ಷಕ ಚಂದ್ರಶೇಖರ್ ಎಂಬಾತ ಅಸಭ್ಯವಾಗಿ ವರ್ತಿಸಿದ ಬಗ್ಗೆ ಆಕೆ ಪೋಷಕರು ಶಾಲೆಗೆ ಆಗಮಿಸಿದ ಘಟನೆ ನಡೆದಿದೆ.
ಕಳೆದ ಏಳೆಂಟು ತಿಂಗಳಿನಿಂದ ವಡೇರಹೋಬಳಿಯ ಈ ಶಾಲೆಯಲ್ಲಿ ಮುಖ್ಯಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್ ವಿರುದ್ಧ ಆರೋಪ ಮಾಡಲಾಗುತ್ತಿದ್ದು ಭಾನುವಾರ ಬೆಳಿಕ್ಕೆ ವಿಶೇಶಾ ಕಲಿಕಾ ತರಬೇತಿಗೆ ಬಂದ ಇನ್ನೊಂದು ಖಾಸಗಿ ಶಾಲೆಯ ವಿದ್ಯಾರ್ಥಿನಿಯೋರ್ವಳ ಜೊತೆ ಆತ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಆಕೆ ಈ ವಿಚಾರವನ್ನು ಸಂಜೆ ಮನೆಯಲ್ಲಿ ಹೇಳಿದ್ದು ಆಕೆ ಪೋಷಕರು ಹಾಗೂ ಸ್ಥಳಿಯ ಜನಪ್ರತಿನಿಧಿಗಳು ಶಾಲೆಗೆ ವಿಚಾರಣೆ ನಡೆಸುವ ಸಲುವಾಗಿ ತೆರಳಿದ್ದಾಗ ಮುಖ್ಯ ಶಿಕ್ಷಕ ಶಾಲೆಗೆ ಬಾರದೇ ತಲೆಮರೆಸಿಕೊಂಡಿದ್ದಾನೆನ್ನಲಾಗಿದ್ದು ಸಂಜೆ ವೇಳೆ ಬಿಇಓ ಕಛೇರಿಗೆ ಆಗಮಿಸಿ ತನಿಖೆಗೊಳಪಟ್ಟಿದ್ದಾನೆನ್ನಲಾಗಿದೆ. ಘಟನೆ ಬಗ್ಗೆ ತಿಳಿಯುತ್ತಲೇ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಹಾಗೂ ಕುಂದಾಪುರ ಉಪನಿರೀಕ್ಷಕ ನಾಸೀರ್ ಹುಸೇನ್ ಶಾಲೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.
ಯುವತಿ ದೂರು ನೀಡದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ. ಆದರೇ ಇಂತಹ ಕ್ರತ್ಯ ನಡೆಸಿದ ಮುಖ್ಯ ಶಿಕ್ಷಕನನ್ನು ಕೆಲಸದಿಂದ ಅಮಾನತು ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.
Comments are closed.