ಕರಾವಳಿ

7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಆಮಂತ್ರಣ ಪತ್ರಿಕೆ ನೀಡಿ ಗೌರವ

Pinterest LinkedIn Tumblr

invitation_to_shikaripur

ಮಂಗಳೂರು : ಶಿಕಾರಿಪುರ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ‌ ಆಯ್ಕೆಯಾದ ಡಾ. ಶಿಕಾರಿಪುರ ಕೃಷ್ಣಮೂರ್ತಿಯವರನ್ನು ಶ್ರೀಕ್ಷೇತ್ರ ಕದ್ರಿಯ‌ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ‌ ಅಧ್ಯಕ್ಷರಾದ ಶ್ರೀ ಎಸ್. ಪ್ರದೀಪ್ ಕುಮಾರ್ ಕಲ್ಕೂರ‌ ಅವರ ಉಪಸ್ಥಿತಿಯಲ್ಲಿ ಸಮ್ಮೇಳನದ ಆಮಂತ್ರಣ ಪತ್ರಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಿಕಾರಿಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ‌ಅಧ್ಯಕ್ಷರಾದ ಮಲ್ಲಿಕಾರ್ಜುನ ಕಾನೂರು, ಕರ್ನಾಟಕ ರಾಜ್ಯ ಸಹಕಾರ ಸಂಘದ‌ ಉಪಾಧ್ಯಕ್ಷ ಭ್ಯಾ. ಡಿ. ಭಲಾಕಾಂತ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಅಧ್ಯಕ್ಷಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷ ನೇಮಿರಾಜ್, ಹಾಗೂ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Comments are closed.