ಕರಾವಳಿ

ಬೆಂಗಳೂರಿನ ರುದ್ರೇಶ್ ಹತ್ಯೆಗೆ ಖಂಡನೆ; ಆಡಳಿತ ವೈಫಲ್ಯದ ವಿರುದ್ದ ಉಡುಪಿಯಲ್ಲಿ ಬಿಜೆಪಿ ಪ್ರತಿಭಟನೆ

Pinterest LinkedIn Tumblr

ಉಡುಪಿ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಖಂಡಿಸಿ ಹಾಗೂ ರುದ್ರೇಶ್ ಕೊಲೆ ಪ್ರಕರಣವನ್ನು ಖಂಡಿಸಿ ಬಿಜೆಪಿ ಉಡುಪಿ ಜಿಲ್ಲಾ ವತಿಯಿಂದ ಪ್ರತಿಭಟನೆ ನಡೆಯಿತು. ಕ್ಲಾಕ್ ಟವರ್ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಲಾಯಿತು.

udupi_bjp_protest

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ಇರುವರೆಗೆ ಅನೇಕ ಬಿಜೆಪಿ, ಆರ್ ಎಸ್.ಎಸ್ ಕಾರ್ಯಕರ್ತರ ಕೊಲೆ ನಡೆದಿದೆ. ಸಿದ್ದರಾಮಯ್ಯ ಸರ್ಕಾರ ಬಂದ ಬಳಿಕ ಕೆ.ಎಪ್.ಡಿ, ಪಾಪ್ಯುಲರ್ ಪ್ರೆಂಟ್ ಆಫ್ ಇಂಡಿಯಾ ಮೇಲಿನ ಅನೇಕ ಕೇಸುಗಳನ್ನು ವಾಪಾಸ್ ಪಡೆದರ ಫಲವಾಗಿ ಈ ಕೊಲೆ ನಡೆದಿದೆ. ಈ ಮೂಲಕ ಹಿಂದೂ ಸಂಘಟನೆಗಳನ್ನು ಒಡೆಯಲು ರಾಜ್ಯ ಸರ್ಕಾರ ವ್ಯವಸ್ಥಿತ ಸಂಚನ್ನ ಮಾಡಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್, ನಗರ್ಸಭಾ ಸದಸ್ಯರು, ಜಿ.ಪಂ ಅದ್ಯಕ್ಷ ದಿನಕರ್ ಬಾಬು, ಉಪಾದ್ಯಕ್ಷೆ ಶೀಲಾ ಕೆ ಶೆಟ್ತಿ ಮುಂತಾದವರು ಉಪಸ್ಥಿತರಿದ್ದರು.

Comments are closed.