ಕರಾವಳಿ

ವಾಕಿಂಗ್ ಹೊರಟಿದ್ದ ಯುವಕನೆ ಮೇಲೆ ದುಷ್ಕರ್ಮಿಗಳ ತಂಡದಿಂದ ಮಾರಣಾಂತಿಕ ಹಲ್ಲೆ

Pinterest LinkedIn Tumblr

kartik-attached_asigoli

ಕೊಣಾಜೆ, ಅ.22: ಬೆಳಗಿನ ಜಾವ ವಾಕಿಂಗ್ ಹೋಗುತ್ತಿದ್ದ ಯುವಕನೆ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಹಲ್ಲೆಯಿಂದ ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿರುವ ಯುವಕನನ್ನು ಪಜೀರು ಸುದರ್ಶನ ನಗರದ ಉಮೇಶ್ ಎಂಬವರ ಪುತ್ರ ಕಾರ್ತಿಕ್ ರಾಜ್ (27) ಎಂದು ಗುರುತಿಸಲಾಗಿದೆ.

ಕಾರ್ತಿಕ್ ದಿನಾ ಬೆಳಿಗ್ಗೆ ಪಜೀರ್ ನಿಂದ ಅಸೈಗೋಳಿಯವರೆಗೆ ವಾಕಿಂಗ್ ಹೋಗುತ್ತಿದ್ದು, ಬಳಿಕ ತನ್ನ ಸ್ನೇಹಿತನ ಜೊತೆ ಬೈಕಿನಲ್ಲಿ ಜಿಮ್ ಗೆ ತೆರಳುವುದು ವಾಡಿಕೆ. ಎಂದಿನಂತೆ ಇಂದು ಕೂಡಾ ಕಾರ್ತಿಕ್ ಮುಂಜಾನೆ 5:30ರ ವೇಳೆಗೆ ಕೊಣಾಜೆ ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದ ವೇಳೆ ಅಸೈಗೋಳಿ ಸಮೀಪದ ಗಣೇಶ್ ಮಹಲ್ ಬಳಿ ತಲುಪುತಿದ್ದಂತೆ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಕಾರ್ತಿಕ್ ರಾಜ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆ ನಡೆಸಿದ ಬಳಿಕ ದುಷ್ಕರ್ಮಿಗಳ ತಂಡ ಸ್ಥಳದಿಂದ ಪರಾರಿಯಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಕಾರ್ತಿಕ್ ನನ್ನು ಕೂಡಲೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ನಿರ್ಧಿಷ್ಟ ಕಾರಣ ತಿಳಿದು ಬಂದಿಲ್ಲ. ಕೊಣಾಜೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.

Comments are closed.