ಕರಾವಳಿ

ಅಕ್ರಮ ಮರಳು ಸಾಗಾಟ: ಪೊಲೀಸರಿಂದ ಮರಳು ತುಂಬಿದ ಟಿಪ್ಪರ್ ವಶ

Pinterest LinkedIn Tumblr

ಕುಂದಾಪುರ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಕುಂದಾಪುರ ಪೊಲಿಸರು ಕಾರ್ಯಾಚರಣೆ ನಡೆಸಿ ಮರಳು ಸಮೇತ ಟಿಪ್ಪರ್ ವಾಹನ ವಶಕ್ಕೆ ಪಡೆದ ಘಟನೆ ಕುಂದಾಪುರ ತಾಲೂಕಿನ ಹಟ್ಟಿಕುದ್ರು ಎಂಬಲ್ಲಿ ನಡೆದಿದೆ.

Jpeg

Jpeg

Jpeg

Jpeg

ಹಟ್ಟಿಕುದ್ರು ಭಾಗದಲ್ಲಿ ಕೆಲವಾರು ದಿನಗಳಿಂದ ರಾತ್ರಿ ಸಮಯದಲ್ಲಿ ಅಕ್ರಮ ಮರಳು ತೆಗೆಯುವುದು, ಮರಳು ಸಾಗಾಟ ಮಾಡುವ ಬಗ್ಗೆ ಆರೋಪಗಳು ಕೇಳಿಬಂದಿದ್ದಲ್ಲದೇ ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಲಾಗಿತ್ತು. ಇದರಂತೆಯೇ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದರು. ಖಚಿತ ವರ್ತಮಾನದಂತೆ ಅಕ್ರಮವಾಗಿ ಮರಳು ಸಾಗಾಟ ನಡೆಯುವ ವೇಳೆಯೇ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ ಮರಳು ತುಂಬಿದ್ದ ಟಿಪ್ಪರ್ ಸಿಕ್ಕಿದೆ. ಚಾಲಕ ಪರಾರಿಯಾಗಿದ್ದಾನೆನ್ನಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧವಿದ್ದರೂ ಕೂಡ ರಾತ್ರೋರಾತ್ರಿ ಮರಳು ತೆಗೆಯುವುದು, ದಾಸ್ತಾನು ಮಾಡುವುದು, ಸಾಗಾಟ ಮಾಡುವುದು ಅವ್ಯಾಹತವಾಗಿ ನಡೆಯುತ್ತಿದೆ. ಕೆಲವು ಕಡೆಗಳಲ್ಲು ಸಾರ್ವಜನಿಕರೂ ದೂರಿದರೂ ಕೂಡ ಅಧಿಕಾರಿಗಳು ಕ್ಯಾರೇ ಅನ್ನುತ್ತಿಲ್ಲ ಎನ್ನುವ ಆರೋಪಗಳು ಕೇಳಿಬಂದಿದೆ.

Comments are closed.