ಕರಾವಳಿ

ಉಡುಪಿಯಲ್ಲಿ ಸಿಎಂ ಕಾರ್ಯಕ್ರಮಕ್ಕೆ ಅಡ್ಡಿಯ ಬೆದರಿಕೆ; ಹಲವರ ಬಂಧನ

Pinterest LinkedIn Tumblr

arrest

ಉಡುಪಿ: ಉಡುಪಿಯಲ್ಲಿ ನಡೆಯಲಿರುವ ಸರಕಾರಿ ಆಸಪ್ತ್ರೆಯ ಶಿಲನ್ಯಾಸ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶಿಸುವ ಹಾಗೂ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸಹಿತ ಹಲವರ ಬಂಧನವಾಗಿದೆ ಎನ್ನಲಾಗಿದೆ.

ಉಡುಪಿಯ ಜೋಡುಕಟ್ಟೆಯಲ್ಲಿ ಇನ್ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಬಂಧನ. ಇಂದು ಆಸ್ಪತ್ರೆಯ ಶಿಲಾನ್ಯಾಸ ನಡೆಸಲಿರುವ ಸಿಎಂ ಭಾಗವಹಿಸುವ ಕಾರ್ಯಕ್ರಮದ ಶಿಲಾನ್ಯಾಸಕ್ಕೂ ಮುನ್ನ ಪ್ರತಿಭಟನಾಕಾರರ ಬಂಧನ ಮಾಡಲಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅರೆಸ್ಟ್ ಆಗಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಬಂಧನ:
ಸಿಎಂ ಕಾರ್ಯಕ್ರಮಕ್ಕೆ ಅಡ್ಡಿ ಹಿನ್ನಲೆಯಲ್ಲಿ ಉಡುಪಿಯ ಕಲ್ಸಂಕದಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಬಂಧನ ಮಾಡಲಾಗಿದೆ. ಪ್ರತಿಭಟನಾ ಮೆರವಣಿಗೆಯಲ್ಲಿ ಬಂದಿದ್ದ ಕಾರ್ಯಕರ್ತರನ್ನು ಅಡ್ಡಗಟ್ಟಿದ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

Comments are closed.