ಮಂಗಳೂರು : ಟಿಪ್ಪು ಸುಲ್ತಾನ್ ಜಯಂತಿಗೆ ಸಂಬಂಧಿಸಿದಂತೆ ದ.ಕ. ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾ ಗುವುದು. ಜಿಲ್ಲೆಯ 50 ಕಡೆಗಳಲ್ಲಿ ಪೊಲೀಸ್ ಚೆಕ್ಪೋಸ್ಟ್ಗಳನ್ನು ತೆರೆದು ತಪಾಸಣೆ ನಡೆಸಲಾ ಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಸುದ್ದಿಗೊಷ್ಠಿಯಲ್ಲಿಂದು ತಿಳಿಸಿದ್ದಾರೆ.
ಕೊಡಗು ಹಾಗೂ ಆಸುಪಾಸಿನ ಜಿಲ್ಲೆಗಳ ಮೂಲಕ ದುಷ್ಕರ್ಮಿಗಳು ನುಸುಳದಂತೆ ಹಾಗೂ ಜಿಲ್ಲೆಯಿಂದ ಹೊರಗೆ ದುಷ್ಕರ್ಮಿಗಳ ಚಟುವಟಿಕೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು. ಕಳೆದ ಬಾರಿ ಟಿಪ್ಪು ಜಯಂತಿ ಆಚರಣೆ ಸಂದರ್ಭ ಜಿಲ್ಲೆಯ ಒಟ್ಟು ಒಂಬತ್ತು ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆದಿದ್ದವು. ಅಂತಹ ಪ್ರದೇಶಗಳಲ್ಲಿ ಶಾಂತಿ ಕದಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಸರಕಾರಿ ಕಾರ್ಯಕ್ರಮಕ್ಕೆ ಸಂಬಂಧಿಸಿ ನ.9 ಮತ್ತು 10ರಂದು ಸಂಘಟನೆಗಳಿಗೆ ಬ್ಯಾನರ್ ಹಾಕಲು ಅವಕಾಶ ಕಲ್ಪಿಸಲಾಗುವುದು ಎಂದ ಎಸ್ಪಿ, ಕೋಮುಗಲಭೆಗೆ ಪ್ರೇರಣೆ ನೀಡುವ ಹಾಗೂ ಗಲಭೆಗಳಲ್ಲಿ ಭಾಗಿಯಾಗುವ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
Comments are closed.