ಕರಾವಳಿ

ಕೇಂದ್ರ ರಸ್ತೆ ನಿಧಿ : ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ 235 ಕೋಟಿ ಅನುದಾನ

Pinterest LinkedIn Tumblr

ಉಡುಪಿ: ಕೇಂದ್ರ ರಸ್ತೆ ನಿದಿ ಯೋಜನೆಯಡಿಯಲ್ಲಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನಲ್ಲಿ ಒಟ್ಟು ರೂಪಾಯಿ 235 ಕೋಟಿ ಅನುದಾನ ಕೇಂದ್ರ ಸರಕಾರದಿಂದ ಮಂಜೂರಾಗಿದೆ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

shobha2

ಈ ಬೃಹತ್ ಮೊತ್ತದ ಅನುದಾನದಿಂದ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗ್ರಾಮೀಣ ಪ್ರದೇಶಗಳ ಅನೇಕ ರಸ್ತೆಗಳ ಅಭಿವೃದ್ಧಿ ಹೊಂದಿ ಆ ಪರಿಸರದ ಸಮಗ್ರ ಅಭಿವೃದ್ಧಿಗೆ ಕಾರಣವಾಗಲಿವೆ. ಮಂಜೂರಾದ ಅನುದಾನದ ಪೈಕಿ ಉಡುಪಿ ಜಿಲ್ಲೆಗೆ ರೂಪಾಯಿ 207.5 ಕೋಟಿಗಳ ಅನುದಾನ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ರೂಪಾಯಿ 27.5 ಕೋಟಿಗಳ ಅನುದಾನ ಲಭ್ಯವಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Comments are closed.