ಮಂಗಳೂರು ನವೆಂಬರ್.10: ಅಪರಿಚಿತ ದುಷ್ಕರ್ಮಿಗಳು ರಾಷ್ಟ್ರೀಯ ಸ್ವಯಂ ಸೇವಾಕ ಸಂಘದ (ಆರ್.ಎಸ್.ಎಸ್) ಕಾರ್ಯಕರ್ತನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಗುರುವಾರ ಸಂಜೆ ಮಂಗಳೂರು ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರ್ ಎಂಬಲ್ಲಿ ನಡೆದಿದೆ.
ಹಲ್ಲೆಗೀಡಾದ ವ್ಯಕ್ತಿಯನ್ನು ಆರ್.ಎಸ್.ಎಸ್ ಕಾರ್ಯಕರ್ತ ಅಂಬ್ಲಮೊಗರು ನಿವಾಸಿ ರಾಮ್ ಮೋಹನ್(32) ಎಂದು ಗುರುತಿಸಲಾಗಿದೆ.
ರಾಮ್ ಮೋಹನ್ ಅವರು ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ತಲವಾರಿನಿಂದ ಕಡಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ದಾಳಿಯಿಂದ ತಲೆಗೆ ಗಂಭೀರ ಗಾಯಗೊಂಡಿದ್ದ ಮೋಹನ್ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೂಡಲೇ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗಿದೆ.ಇದೀಗ ಅವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪತ್ತೆಗೆ ಸಚಿವ ಯು.ಟಿ.ಖಾದರ್ ಅಗ್ರಹ :
ಘಟನೆಯನ್ನು ಸಚಿವ ಯು.ಟಿ.ಖಾದರ್ ಖಂಡಿಸಿ ಬೆಂಗಳೂರಿನಿಂದ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಅಲ್ಲದೆ ಮಂಗಳೂರು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ ಅವರು ಆರೋಪಿ ದುಷ್ಕರ್ಮಿಗಳನ್ನು ಕೂಡಲೇ ಪತ್ತೆ ಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಸೂಚನೆ ನೀಡಿದ್ದಾರೆ.
Comments are closed.